ಕಬಡ್ಡಿ ಪಂದ್ಯಾವಳಿಯಲ್ಲಿ ಮಾಯಕೊಂಡ ತಂಡ ಚಾಂಪಿಯನ್

blank

ಮಾಯಕೊಂಡ: ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಾಯಕೊಂಡದ ತಂಡ ಪ್ರಥಮ ಸ್ಥಾನ ಗಳಿಸಿದೆ.

ಮಾಯಕೊಂಡದ ಯೂತ್ ಕ್ಲಬ್‌ನಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪ್ರಥಮ ಸ್ಥಾನ ಪಡೆದ ತಂಡಕ್ಕೆ ಮಾಯಕೊಂಡದ ತಂಡವು ದಾವಣಗೆರೆಯ ಡಿವೈಇಎಸ್ ತಂಡ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ದಾವಣಗೆರೆಯ ಚಾಮುಂಡೇಶ್ವರಿ ತಂಡ ತೃತೀಯ ಸ್ಥಾನ ಪಡೆಯಿತು.

ಕ್ರೀಡಾಪಟು ಕಡ್ಡಿ ಅಭಿ ಬೆಸ್ಟ್ ರೈಡರ್, ಕಾರ್ತಿಕ್ ಬೆಸ್ಟ್ ಡಿಫೆಂಡರ್, ದಾವಣಗೆರೆಯ ಡಿವೈಇಎಸ್ ತಂಡದ ಹನುಮಂತು ಬೆಸ್ಟ್ ಆಲ್ ರೌಂಡರ್ ಆಗಿ ಹೊರಹೊಮ್ಮಿದರು.

ಗ್ರಾಪಂ ಅಧ್ಯಕ್ಷೆ ಲತಾ ಜಿ.ಆರ್. ಮಲ್ಲಿಕಾರ್ಜುನ್, ಪೊಲೀಸ್ ಇಲಾಖೆಯ ರಾಜು, ಪ್ರತಾಪ್, ಭೀಮರಾಜ್, ಕುಮಾರ್ ಪಾಪು, ಮಜ್ಜಿಗೆ ರಮೇಶ್, ಅಂಜು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರದೀಪ್, ಹನುಮಂತು, ಕೆ. ರವಿ ಕಾರ್ಯನಿರ್ವಹಿಸಿದರು. ಆಯೋಜಕರಾದ ಪವನ್, ಶರತ್, ಅಮರ್, ಅಭಿ, ನಂದೀಶ್, ಸೂರಿ ಇತರರಿದ್ದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…