More

    ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂದಿದ್ದ ಎಂಬಿ ಪಾಟೀಲ್; ಸ್ಪಷ್ಟನೆ ನೀಡಿ ಯು ಟರ್ನ್!

    ಬೆಂಗಳೂರು: ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂದು ಎಂಬಿ ಪಾಟೀಲ್ ಈ ಹಿಂದೆ ಹೇಳಿದ್ದರು. ಈ ವಿಚಾರ ಅನೇಕರಲ್ಲಿ ಗೊಂದಲ ಮೂಡಿಸಿತ್ತು. ಇದೀಗ ಎಂಬಿ ಪಾಟೀಲ್ ಯು ಟರ್ನ್ ತೆಗೆದುಕೊಂಡಿದ್ದು ಪಕ್ಷದ ವರಿಷ್ಟರು ಹೇಳಿದ್ದನ್ನು ಮಾತ್ರ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಅವರು “ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನೆನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು. ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನೆ ಹೇಳಿದ್ದೆ. ಪವರ್ ಸ್ಟೇರಿಂಗ್ ಶೇರಿಂಗ್ ಇಲ್ಲ ಇದ್ರೆ ಅದು ಜನರ ಜತೆ ಮಾತ್ರ ಅಂತ‌ ಹೇಳಿದ್ರು.

    ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನ ಅಷ್ಟೇ ನಾನು ಹೇಳಿದ್ದು. ಪವರ್ ಸ್ಟೇರಿಂಗ್ ಇದ್ರೆ ಅದು ಜನರ ಜತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ದು ನಾನು ಅದನ್ನೆ ಹೇಳಿದ್ದೇನೆ” ಎಂಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts