More

    ಕೇಂದ್ರ ಸರ್ಕಾರಿ ನೌಕರನಿಂದ ದೇಶದ್ರೋಹಿ ಕೆಲಸ; ಪಾಕಿಸ್ತಾನಿಯಿಂದ ಹನಿಟ್ರ್ಯಾಪ್​ಗೆ ಒಳಗಾದವನ ಬಂಧನ..

    ನವದೆಹಲಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಕಳಿಸಿಕೊಡುವ ಮೂಲಕ ದೇಶದ್ರೋಹಿ ಕೆಲಸದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬನನ್ನು ರಾಜಧಾನಿಯ ಪೊಲೀಸರು ಬಂಧಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಕಾರು ಚಾಲಕ ಬಂಧಿತ ಆರೋಪಿ.

    ವಿದೇಶಾಂಗ ಸಚಿವಾಲಯದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣನ್ ಎಂಬಾತ ಹನಿಟ್ರ್ಯಾಪ್​ಗೆ ಒಳಗಾಗಿ ಪಾಕಿಸ್ತಾನಕ್ಕೆ ದೇಶದ ರಹಸ್ಯ ಮಾಹಿತಿಯನ್ನು ಕಳಿಸಿಕೊಡುತ್ತಿದ್ದ ಆರೋಪದ ಮೇಲೆ ಆತನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

    ಪಾಕಿಸ್ತಾನದ ಇಂಟೆಲೆಜೆನ್ಸ್ ಏಜೆನ್ಸಿಯಿಂದ ಹನಿಟ್ರ್ಯಾಪ್​ಗೆ ಒಳಗಾದ ಶ್ರೀಕೃಷ್ಣನ್, ದೇಶದ ಭದ್ರತೆಗೆ ಸಂಬಂಧಿಸಿದ ಗುಪ್ತ ಮಾಹಿತಿಯನ್ನು ಐಎಸ್​​ಐಗೆ ರವಾನಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹುಡುಗಿಯರ ಫೋಟೋ ಹಾಗೂ ವಿಡಿಯೋಗಳನ್ನೂ ಆತನಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಲಾಗುತ್ತಿದೆ.

    ಪೊಲೀಸ್ ಹಾಗೂ ಇಂಟೆಲಿಜೆನ್ಸ್ ಏಜೆನ್ಸಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಸುತ್ತಿದ್ದು, ವಿದೇಶಾಂಗ ಸಚಿವಾಲಯದ ಇತರರೂ ಇದರಲ್ಲಿ ಪಾಲ್ಗೊಂಡಿದ್ದರೇ ಎಂಬ ಮಾಹಿತಿಯನ್ನೂ ಕಲೆ ಹಾಕುತ್ತಿದ್ದಾರೆ. ಅದಾಗ್ಯೂ ಸಚಿವಾಲಯದಿಂದ ಈ ಕುರಿತಂತೆ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. –ಏಜೆನ್ಸೀಸ್

    ಕೇಂದ್ರ ಸರ್ಕಾರಿ ನೌಕರನಿಂದ ದೇಶದ್ರೋಹಿ ಕೆಲಸ; ಪಾಕಿಸ್ತಾನಿಯಿಂದ ಹನಿಟ್ರ್ಯಾಪ್​ಗೆ ಒಳಗಾದವನ ಬಂಧನ..

    ಮತ್ತೆ ಬರುತ್ತೆ ಆರ್ಕುಟ್​?; ರಿಪ್​ ಟ್ವಿಟರ್​ ಟ್ರೆಂಡಿಂಗ್​ ಬೆನ್ನಿಗೇ ಗರಿಗೆದರಿದ ನಿರೀಕ್ಷೆ..

    ಒಂದೂವರೆ ವರ್ಷದ ಮಗನನ್ನೇ ಮಾರಿದ ತಾಯಿ; ನಾಲ್ಕೂವರೆ ವರ್ಷ ಹುಡುಕಾಡಿ ಪುತ್ರನನ್ನು ಪತ್ತೆ ಮಾಡಿ ಪಡೆದ ತಂದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts