ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಲಾಂಛನ ಅನಾವರಣ

Kuwj (1)

 

ಬೆಂಗಳೂರು:
ತುಮಕೂರಿನಲ್ಲಿ ನವೆಂಬರ್ 24ರಂದು ನಡೆಯಲಿರುವ ರಾಜ್ಯ ಪತ್ರಕರ್ತರ ಕ್ರೀಡಾಕೂಟದ ಲಾಂಛನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅನಾವರಣ ಮಾಡಿದರು.
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದು ಶುಕ್ರವಾರ ಜರುಗಿದ ಜಿಲ್ಲಾ ರಾಜ್ಯೋತ್ಸವ ವೇದಿಕೆಯಲ್ಲಿ ಕ್ರೀಡಾ ಲಾಂಛನವನ್ನು ಅನಾವರಣ ಮಾಡಿದ್ದು ವಿಶೇಷ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತುಮಕೂರು ಜಿಲ್ಲಾ ಘಟಕದ ಆತಿಥ್ಯದಲ್ಲಿ ಸಂಘಟಿಸುತ್ತಿರುವ ಕ್ರೀಡಾಕೂಟಕ್ಕೆ ಸಚಿವರು ಯಶಸ್ಸು ಕೋರಿದರು.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣ ಅತ್ಯಂತ ಸುಸಜ್ಜಿತವಾಗಿ ನವೀಕರಣಗೊಂಡಿದ್ದು, ಈ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸಂತಸದ ಸಂಗತಿ. ಸದಾ ಕರ್ತವ್ಯ ಒತ್ತಡ ದಲ್ಲಿರುವ ಪತ್ರಕರ್ತರು ಒಂದು ದಿನದ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂತಸದ ಕ್ಷಣದ ನೆನಪುಗಳೊಂದಿಗೆ ಮರಳಬೇಕು. ಜಿಲ್ಲಾಡಳಿತ ದಿಂದ ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನೀ.ಪುರುಷೋತ್ತಮ, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಆರ್.ರಾಜೇಂದ್ರ, ಡಿಸಿ ಶುಭಕಲ್ಯಾಣ್, ಸಿಇಓ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಆಯುಕ್ತೆ ಬಿ.ವಿ.ಅಶ್ವಿಜ, ಎಡಿಸಿ ತಿಪ್ಪೇಸ್ವಾಮಿ, ರಾಷ್ಟ್ರೀಯ ಮಂಡಳಿ ಸದಸ್ಯರಾದ ಟಿ.ಎನ್.ಮಧುಕರ್, ಡಿ.ಎಂ.ಸತೀಶ್, ಶಾಂತರಾಜು, ಕಾರ್ಯದರ್ಶಿ ಸತೀಶ್ ಹಾರೋಗೆರೆ ಮತ್ತು ಪದಾಧಿಕಾರಿಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.

TAGGED:
Share This Article

ಭಾರತದ ಈ 7 ನಗರಗಳಲ್ಲಿ ಮಾಂಸದೂಟ ಸಂಪೂರ್ಣ ನಿಷೇಧ! ಸಸ್ಯಾಹಾರಿ ಆಹಾರಕ್ಕೆ ಮಾತ್ರ ಅವಕಾಶ | No Meat City

No Meat Cities: ಭಾರತ ಒಂದು ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಪಾಕಪದ್ಧತಿಗಳ ದೇಶ. ಇಲ್ಲಿನ ಸಂಸ್ಕೃತಿ,…

ಚಳಿಗಾಲದಲ್ಲಿ ತುಟಿಗಳು ಒಣಗಿವೆಯೇ? ಇದನ್ನು ಪ್ರಯತ್ನಿಸಿ…Winter Care

Winter Care : ಹವಾಮಾನ ಬದಲಾದಂತೆ ನಮ್ಮ ದೇಹದಲ್ಲಿ ಹಲವಾರು ಬದಲಾವಣೆಗಳು ಸಂಭವಿಸುತ್ತವೆ.ಶೀತ ಋತುವಿನ ನಂತರ…

ಕೈ, ಕಾಲು, ಸೊಂಟದ ಸುತ್ತಲೂ ಕಪ್ಪು ದಾರ ಕಟ್ಟುವ ಅಭ್ಯಾಸ ಇದ್ಯಾ? ಹಾಗಿದ್ರೆ ಮೊದಲು ಇದನ್ನು ತಿಳಿದುಕೊಳ್ಳಿ… Black Thread

Black Thread: ಕೈ, ಕಾಲು ಮತ್ತು ಸೊಂಟದ ಸುತ್ತಲೂ ಕಪ್ಪು ದಾರವನ್ನು  ಕಟ್ಟಿಕೊಳ್ಳುವುದರ ಹಿಂದೆ ಬಲವಾದ…