More

    ಸಂಕಷ್ಟಕ್ಕೆ ಸಿಲುಕುತ್ತಿರುವ ಔಷಧ ವ್ಯಾಪಾರ: ಜಿಲ್ಲಾ ವ್ಯಾಪಾರಿಗಳ ಮತ್ತು ವಿತರಕರ ಸಂಸ್ಥೆ ಅಧ್ಯಕ್ಷ ಬಿ.ಲೋಕೇಶ್ ಬೇಸರ

    ಮಂಡ್ಯ: ಆನ್‌ಲೈನ್ ವ್ಯಾಪಾರ, ಅಂತಾರಾಷ್ಟ್ರೀಯ ಕಂಪನಿಗಳ ರಿಯಾಯಿತಿ ದರದ ಹಾವಳಿ ಸೇರಿದಂತೆ ಹಲವು ಸಮಸ್ಯೆಯಿಂದಾಗಿ ಔಷಧ ವ್ಯಾಪಾರ ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಜಿಲ್ಲಾ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಸ್ಥೆಯ ಅಧ್ಯಕ್ಷ ಬಿ.ಲೋಕೇಶ್ ಬೇಸರ ವ್ಯಕ್ತಪಡಿಸಿದರು.
    ಬೆಂಗಳೂರಿನಲ್ಲಿರುವ ರಾಜ್ಯ ಔಷಧ ನಿಯಂತ್ರಕ ಕೇಂದ್ರ ಕಚೇರಿಗೆ ಭೇಟಿ ನೀಡಿ ಔಷಧ ನಿಯಂತ್ರಕ ಭಾಗೋಜಿ ಟಿ.ಖಾನಾಪರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಸಾರ್ವಜನಿಕ ಸೇವೆಗಳಲ್ಲಿ ಉತ್ತಮ ಸೇವೆ ಎಂದೇ ಪರಿಗಣಿಸಿರುವ ಔಷಧ ವ್ಯಾಪಾರ ಇತ್ತೀಚಿನ ದಿನಗಳಲ್ಲಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಿಕೊಂಡು ಬರುತ್ತಿದೆ. ಆದ್ದರಿಂದ ಅಧಿಕಾರಿಗಳು ಹಾಗೂ ಸರ್ಕಾರ ಈ ಎಲ್ಲ ಸಮಸ್ಯೆಗಳಿಂದ ಔಷಧ ವ್ಯಾಪಾರಿಗಳನ್ನು ಮುಕ್ತಗೊಳಿಸಬೇಕೆಂದು ಮನವಿ ಮಾಡಿದರು.
    ಮನವಿಗೆ ಸ್ಪಂದಿಸಿದ ಭಾಗೋಜಿ ಟಿ.ಖಾನಾಪರ ಪ್ರತಿಕ್ರಿಯಿಸಿ, ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
    ಸಂಘದ ಉಪಾಧ್ಯಕ್ಷ ಬಿ.ರಾಜಣ್ಣ, ಕಾರ್ಯದರ್ಶಿ ಕೆ.ಎಲ್. ರಾಜಶೇಖರ್, ಸಂಘಟನಾ ಕಾರ್ಯದರ್ಶಿ ಮಹೇಶ್, ಸಲಹೆಗಾರ ಪ್ರಭಾಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts