More

    ಮೇಡ್ಲೇರಿಯಲ್ಲಿ ಬೊಮ್ಮಾಯಿ ಭರ್ಜರಿ ರೋಡ್ ಶೋ; ಮೇಡ್ಲೇರಿ ಪ್ರವಾಸಿ ತಾಣವನ್ನಾಗಿ ಮಾಡುವ ಭರವಸೆ

    ರಾಣೆಬೆನ್ನೂರ: ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆ ಕೊಡಿಸಿ ಜೀವ ಉಳಿಸಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಹೃದಯ ಸಾಮ್ರಾಟ್. ಅಂಥವರನ್ನು ಮತ್ತೊಮ್ಮೆ, ಮಗದೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರೇ ಸಂಕಲ್ಪ ಮಾಡಿದ್ದಾರೆ. ಇದನ್ನು ಸತ್ಯಗೊಳಿಸಲು ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
    ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಶನಿವಾರ ರೋಡ್ ಶೋ ಮೂಲಕ ಮತಯಾಚನೆ ಮಾಡಿದ ಅವರು, ಮೇಡ್ಲೇರಿ ಗ್ರಾಮ ಸುಕ್ಷೇತ್ರವಾಗಿದ್ದು, ಈ ಊರನ್ನು ಅಭಿವೃದ್ಧಿ ಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿ ಮಾಡಲಾಗುವುದು. ನಾನು ಕನಕದಾಸರ ಹುಟ್ಟಿದ ಬಾಡ ಕ್ಷೇತ್ರವನ್ನು 24 ಕೋಟಿ ರೂ. ವೆಚ್ಚ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಇಲ್ಲಿ ನಿತ್ಯವೂ ಮೂರು ನಾಲ್ಕು ಸಾವಿರ ಜನರು ಭೇಟಿ ಕೊಡುತ್ತಿದ್ದಾರೆ. ಸಂಗೊಳ್ಳಿಯಲ್ಲಿ ರಾಯಣ್ಣನ ಸೈನಿಕ ಶಾಲೆಯನ್ನು 180 ಕೋಟಿ ರೂ. ವೆಚ್ಚ ಮಾಡಿ ಆರಂಭಿಸಿದ್ದೇವೆ. ಕುರುಬ ಸಮಾಜಕ್ಕೆ ವಿಶೇಷ ಒತ್ತು ನೀಡಲಾಗುವುದು. ಮೇಡ್ಲೇರಿಯನ್ನು ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿ ಮಾಡಿ, ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಭರವಸೆ ನೀಡಿದರು.
    ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ನಗರಸಭೆ ಸದಸ್ಯ ನಿಂಗರಾಜ ಕೋಡಿಹಳ್ಳಿ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶಪ್ಪ ಗೂಳಣ್ಣನವರ ಹಾಗೂ ಮೇಡ್ಲೇರಿ ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts