blank

ನಾನೊಂದು ತೀರ, ನೀನೊಂದು ತೀರ! ಮೌನಕ್ಕೆ ಶರಣಾದ ಮುಸ್ಕಾನ್​ ಸರ್ಕಾರಿ ವಕೀಲರಿಗಾಗಿ ಅಳಲು | Murder Case

blank

Murder Case: ಪ್ರಿಯಕರನ ಜತೆ ಪ್ರೇಮ ಸಲ್ಲಾಪ ನಡೆಸಲು ಅಡ್ಡಿಯಾಗಿದ್ದ ಪತಿಯನ್ನು ಭೀಕರವಾಗಿ ಹತ್ಯೆಗೈದ ಪಾಪಿ ಪತ್ನಿ ಮತ್ತು ಆಕೆಯ ಪ್ರಿಯಕರ, ಸೌರಭ್​ ರಜಪುತ್​ನನ್ನು 15 ತುಂಡುಗಳಾಗಿ ಕತ್ತರಿಸಿ, ದೇಹದ ಭಾಗಗಳನ್ನು ಡ್ರಮ್​ನಲ್ಲಿರಿಸಿ, ಅದರ ಮೇಲೆ ಸಿಮೆಂಟ್​ನಿಂದ ಮುಚ್ಚಿಟ್ಟ ಘಟನೆ ಇಡೀ ಮೀರತ್​ ನಗರ ನಿವಾಸಿಗಳನ್ನೇ ಬೆಚ್ಚಿಬೀಳಿಸಿದೆ.

blank

ಇದನ್ನೂ ಓದಿ: ಗಂಭೀರ ಪ್ರಕರಣ ರಾಜಿ ಇತ್ಯರ್ಥ ಸಲ್ಲ – ಠಾಣಾಧಿಕಾರಿಗಳಿಗೆ ಡಿಸಿಪಿ ಸಿದ್ಧಾರ್ಥ ಗೋಯಲ್ ನಿರ್ದೇಶನ

ಪ್ರಸ್ತುತ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್, ಪ್ರತ್ಯೇಕ ಸೆಲ್​ಗಳಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಇಬ್ಬರೂ ಒಬ್ಬರನೊಬ್ಬರು ಮಾತನಾಡಿಸದೆ ಮೌನಕ್ಕೆ ಶರಣಾಗಿದ್ದು, ಪೊಲೀಸ್ ಅಧಿಕಾರಿಗಳ ಬಳಿ ಹೆಚ್ಚೇನೂ ಕೇಳದೆ, ಹೇಳದೆ, ತಿಂಡಿ-ಊಟ ತೊರೆದು ಸುಮ್ಮನಿದ್ದಾರೆ. ಈ ಕುರಿತಂತೆ ಜೈಲಾಧಿಕಾರಿಗಳು ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

“ನಿಯಮದಂತೆ ಇಬ್ಬರೂ ಪ್ರತ್ಯೇಕ ಸೆಲ್​ನಲ್ಲಿದ್ದಾರೆ. ಸಾಹಿಲ್ ಮತ್ತು ಮುಸ್ಕಾನ್​ ಒಬ್ಬರನ್ನೊಬ್ಬರು ಮಾತನಾಡಿಸುವ ಪ್ರಯತ್ನ ಕೂಡ ಮಾಡಿಲ್ಲ. ಮುಖ್ಯವಾಗಿ ಇಲ್ಲಿ ಅದು ಸಾಧ್ಯವಿಲ್ಲ. ವೈದ್ಯಕೀಯ ಪರೀಕ್ಷೆಗಳು ಅವರಿಬ್ಬರು ಮಾದಕ ವ್ಯಸನಿಗಳು ಎಂಬುದನ್ನು ಸಾಬೀತುಪಡಿಸಿದೆ. ಕೆಲವು ರೋಗ ಲಕ್ಷಣಗಳಿಂದ ನರಳುತ್ತಿದ್ದಾರೆ. ಸದ್ಯದ ಮಟ್ಟಿಗೆ ಚಿಕಿತ್ಸೆ ಕೂಡ ಕೊಡಿಸಲಾಗಿದೆ” ಎಂದು ಹಿರಿಯ ಬಂಧಿಖಾನೆ ಸೂಪರಿಂಟೆಂಡೆಂಟ್ ವಿರೇಶ್ ರಾಜ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ 160 ಕೆರೆಗಳಿಗೆ ಕಾಯಕಲ್ಪ : ಧರ್ಮಸ್ಥಳ ಯೋಜನೆ ಕಾರ್ಯಕ್ರಮ

ಇದೆಲ್ಲದರ ಮಧ್ಯೆ ಹಿರಿಯ ಅಧಿಕಾರಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿರುವ ಮುಸ್ಕಾನ್​, “ಈ ಕೇಸ್​ನಲ್ಲಿ ನನ್ನ ಪರ ವಾದಿಸಲು ಕುಟುಂಬಸ್ಥರು ಯಾವ ವಕೀಲಯರನ್ನೂ ನೇಮಕ ಮಾಡುವುದಿಲ್ಲ. ಹೀಗಾಗಿ ಕೊಲೆ ಪ್ರಕರಣದಲ್ಲಿ ನನ್ನ ಪರ ವಾದಿಸಲು ಒಬ್ಬ ಸರ್ಕಾರಿ ವಕೀಲರ ಅಗತ್ಯವಿದೆ. ದಯವಿಟ್ಟು ಇದರ ವ್ಯವಸ್ಥೆಗೆ ಮುಂದಾಗಿ” ಎಂದು ಕೇಳಿಕೊಂಡಿರುವುದಾಗಿ ವರದಿಯಾಗಿದೆ,(ಏಜೆನ್ಸೀಸ್).

ಏನಿದು ಪ್ರಕರಣ

ಉತ್ತರಪ್ರದೇಶ​ ಮೀರತ್‌ನ ಸೌರಭ್ ರಜಪೂತ್ ದೇಹ ಡ್ರಮ್​ನಲ್ಲಿದೆ ಎಂಬುದನ್ನು ಪತ್ತೆಹಚ್ಚಿದ್ದೇ ಅವರ ಆರು ವರ್ಷದ ಮಗಳು. ತಾಯಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಕೊಲೆಗೈದು ತಂದೆಯನ್ನು ಡ್ರಮ್​ನಲ್ಲಿ ಸಿಮೆಂಟ್​ನಿಂದ ಮುಚ್ಚಿರುವುದನ್ನು ಸೌರಭ್ ಪುತ್ರಿ ಕಣ್ಣಾರೆ ನೋಡಿದ್ದಳು. ಈ ವೇಳೆ ಮನೆಯಲ್ಲಿ ಸೌರಭ್ ಕಾಣುತ್ತಿಲ್ಲ ಎಂದು ಅವರ ತಾಯಿ ಗೋಳಾಡಿದ್ದಾರೆ. ಮಗ ನಾಪತ್ತೆಯಾಗಿದ್ದಾನೆ ಆತನನ್ನು ಹುಡುಕಿಕೊಡಿ ಎಂದು ತಾಯಿ ಪೊಲೀಸರ ಮುಂದೆ ಕಣ್ಣೀರಿಟ್ಟಿದ್ದೇ ತಡ ಮೃತ ಸೌರಭ್ ಪುತ್ರಿ, ಅಪ್ಪ ಡ್ರಮ್​ನಲ್ಲಿ ಇದ್ದಾರೆ ಎಂದು ಸುಳಿವು ನೀಡಿದ್ದಳು. ಆದರೆ, ಆ ಕ್ಷಣಕ್ಕೆ ಇದು ಉಪಯೋಗವಾಗಲಿಲ್ಲ. ಕಾರಣ, ಬಾಲಕಿ ತಮಾಷೆ ಮಾಡುತ್ತಿದ್ದಾಳೆ ಎಂದು ಮನೆಯವರು ಅಂದುಕೊಂಡಿದ್ದರು. ಅಂತಿಮವಾಗಿ ಡ್ರಮ್​ನಲ್ಲಿದ್ದ ಸಿಮೆಂಟ್​ ಅನ್ನು ಹೊಡೆದಾಗ ಸೌರಭ್ ಮೃತದೇಹ ಪತ್ತೆಯಾಯಿತು.

 

105 ಮೀಟರ್​ ಸಿಕ್ಸ್​! ​ಟ್ರಾವಿಸ್​ ಹೆಡ್​ ಅಬ್ಬರಕ್ಕೆ​ ಕಾವ್ಯಾ ಮಾರನ್​ ಬೆರಗು​, SRH ಓನರ್​ ರಿಯಾಕ್ಷನ್​ಗೆ ಫ್ಯಾನ್ಸ್ ಫಿದಾ | Kavya Maran

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank