More

    ಎರಡು ವರ್ಷ ಅಲೆದ್ರೂ ಸಿಗದ ಕೆಲಸ: ಟೀ ಮಾರಾಟಕ್ಕಿಳಿದ ಅರ್ಥಶಾಸ್ತ್ರ ಪದವೀಧರೆಯ ಮನಕಲಕುವ ಕತೆಯಿದು

    ಪಟನಾ: ಭಾರತದಲ್ಲಿನ ಪ್ರಖ್ಯಾತ ಚಾಯ್​ವಾಲಾಗಳ ಬಗ್ಗೆ ನಾವು ಕೇಳಿದ್ದೇವೆ. ಅಲ್ಲದೆ, ಪ್ರತಿಯೊಬ್ಬ ಚಹಾ ಪ್ರೇಮಿಗೂ ಓರ್ವ ಫೇವರಿಟ್​ ಚಾಯ್​ವಾಲಾ ಇದ್ದೇ ಇರುತ್ತಾನೆ. ಇದೀಗ ಈ ಪಟ್ಟಿಗೆ ಮತ್ತೊಬ್ಬರು ಸೇರಿದ್ದಾರೆ. ಆದರೆ, ಇವರು ಚಾಯ್​ವಾಲಾ ಅಲ್ಲ ಚಾಯ್​ವಾಲಿ. ಈ ಖ್ಯಾತ ಚಾಯ್​ವಾಲಿ ಬಿಹಾರ ಮೂಲದವರಾಗಿದ್ದು, ಅರ್ಥಶಾಸ್ತ್ರದಲ್ಲಿ ಪದವೀಧರೆಯಾಗಿದ್ದಾರೆ.

    ಎರಡು ವರ್ಷಗಳ ಕಾಲ ಉದ್ಯೋಗಕ್ಕಾಗಿ ಅಲೆದಾಡಿ ಕೊನೆಗೆ ಕೆಲಸ ಸಿಗದಿದ್ದಾಗ ಬಿಹಾರ ರಾಜಧಾನಿ ಪಟನಾದಲ್ಲಿರುವ ಮಹಿಳಾ ಕಾಲೇಜಿನ ಬಳಿ ಟೀ ಸ್ಟಾಲ್​ ಅಳವಡಿಸಿಕೊಂಡಿರುವ ಚಾಯ್​ವಾಲಿ ಸ್ವಂತ ದುಡಿಮೆ ಮಾಡುತ್ತಿದ್ದಾರೆ.

    ಈ ಚಾಯ್​ವಾಲಿ ಹೆಸರು ಪ್ರಿಯಾಂಕಾ ಗುಪ್ತ. 2019ರಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಪದವಿ ಮುಗಿಸಿದ್ದಾರೆ. ಮಧ್ಯಪ್ರದೇಶದ ಖ್ಯಾತ ಚಾಯ್​ವಾಲಾ ಹಾಗೂ ಎಂಬಿಎ ಪದವೀಧರ ಪ್ರಫುಲ್​ ಬಿಲ್ಲೋರ್ ಅವರಿಂದ ಸ್ಪೂರ್ತಿಗೊಂಡಿರುವ ಪ್ರಿಯಾಂಕಾ, ಹಿಂಜರಿಕೆಯನ್ನು ಬಿಟ್ಟು, ಟೀ ಅಂಗಡಿ ಸ್ಥಾಪಿಸಿ ಸ್ವಂತ ಕಾಲ ಮೇಲೆ ನಿಂತಿದ್ದಾರೆ.

    ತನ್ನ ಜೀವನ ಕತೆಯನ್ನು ಹಂಚಿಕೊಂಡರುವ ಪ್ರಿಯಾಂಕಾ, ಅನೇಕ ಚಾಯ್​ವಾಲಾಗಳು ಇರುವಾಗ, ಚಾಯ್​ವಾಲಿ ಯಾಕಾಗಬಾರದು? ನಾನು ನನ್ನ ಪದವಿ ಶಿಕ್ಷಣವನ್ನು 2019ರಲ್ಲಿ ಮುಗಿಸಿದೆ. ಆದರೆ, ಕಳೆದ ಎರಡು ವರ್ಷಗಳಿಂದ ಯಾವುದೇ ಉದ್ಯೋಗ ಸಿಗಲಿಲ್ಲ. ಪ್ರಫುಲ್ಲ್​ ಬಿಲ್ಲೋರ್​ ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ ಎಂದು ಹೇಳಿದ್ದಾರೆ.

    24 ವರ್ಷದ ಪ್ರಿಯಾಂಕಾ ಕುಲ್ಹದ್​ ಚಾಯ್​ನಿಂದ ಪಾನ್​ ಚಾಯ್​ವರೆಗೂ ವಿವಿಧ ರೀತಿಯ ಚಹಾವನ್ನು ಮಾರಾಟ ಮಾಡುತ್ತಾರೆ. ಒಂದು ಕಪ್​ ಚಹಾ 15 ರಿಂದ 20 ರೂ. ಶ್ರೇಣಿಯಲ್ಲಿರುತ್ತದೆ.

    ಇನ್ನೂ ಪ್ರಫುಲ್​ ಬಿಲ್ಲೋರ್ ಬಗ್ಗೆ ಹೇಳುವುದಾದರೆ, ಮಧ್ಯಪ್ರದೇಶದ ಪ್ರಫುಲ್​ ಸದ್ಯ ಗುಜರಾತ್​ನ ಅಹಮದಾಬಾದ್​ನಲ್ಲಿ ನೆಲೆಸಿದ್ದು, ದೇಶಾದ್ಯಂತ ಎಂಬಿಎ ಚಾಯ್​ವಾಲಾ ಎಂದೇ ಪ್ರಖ್ಯಾತಿ ಆಗಿದ್ದಾರೆ. ಬರೋಬ್ಬರಿ 3 ಕೋಟಿ ರೂ. ವಹಿವಾಟು ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಸಿಎಟಿ ಅಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗದಿದ್ದಾಗ ಅಧ್ಯಯನವನ್ನು ಅರ್ಧಕ್ಕೆ ಬಿಡಲು ನಿರ್ಧರಿಸುತ್ತಾರೆ. ಕೊನೆಗೆ ಒಂದು ನಿರ್ಧಾರಕ್ಕೆ ಬರುವ ಪ್ರಫುಲ್ ಬೀದಿ ಬದಿಯಲ್ಲಿ ಟೀ ಮಾರಾಟ ಮಾಡಲು ಆರಂಭಿಸುತ್ತಾರೆ. ಇದಕ್ಕೂ ಮುನ್ನ ಅಹಮದಾಬಾದ್​ನ ರೆಸ್ಟೋರೆಂಟ್​ ಒಂದರಲ್ಲಿ ಪಾರ್ಟ್​ ಟೈಮ್​ ಕೆಲಸ ಮಾಡುತ್ತಿರುತ್ತಾರೆ. ಇದೇ ವೇಳೆ ಟೀ ಮಾಡುವುದನ್ನು ಚೆನ್ನಾಗಿ ಕಲಿಯುವ ಪ್ರಫುಲ್​ ಕೊನೆಗೆ ತನ್ನದೇ ಸ್ವಂತ ಟೀ ಶಾಪ್​ ತೆರೆಯುತ್ತಾರೆ. ಆರಂಭದಲ್ಲಿ ವ್ಯಾಪಾರ ಇಲ್ಲದೇ ಸಮಸ್ಯೆ ಎದುರಾದರೂ ನಂತರದ ದಿನಗಳಲ್ಲಿ ವ್ಯವಹಾರ ಚೆನ್ನಾಗಿಯೇ ನಡೆಯಲು ಆರಂಭಿಸುತ್ತದೆ. (ಏಜೆನ್ಸೀಸ್​)

    ಎಂಬಿಎ ಬಿಟ್ಟು ಟೀ ಮಾರಾಟಕ್ಕಿಳಿದ ಯುವಕನ ಯಶೋಗಾಥೆ ಕೇಳಿದ್ರೆ ಫಿದಾ ಆಗೋದು ಗ್ಯಾರೆಂಟಿ!

    ನಾಗಚೈತನ್ಯ 2ನೇ ಮದ್ವೆಗೆ ರೆಡಿಯಾಗಿರುವ ಸುದ್ದಿ ನಿಜವೋ? ವದಂತಿಯೋ?…ಇಲ್ಲಿದೆ ಅಸಲಿ ವಿಚಾರ

    ಜೈನ ಭಗವತಿ ದೀಕ್ಷೆ ಸ್ವೀಕರಿಸಲಿದ್ದಾರೆ ಶಿವಮೊಗ್ಗದ ಬಾಲಕಿ! ಅತ್ತೆಯ ಪ್ರಭಾವ… ಸುಖ-ವೈಭೋಗಕ್ಕೆ ವಿದಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts