ಮಕ್ಕಳಲ್ಲಿ ಕೃಷಿಯ ಆಸಕ್ತಿ ಬೆಳೆಸುವುದು ಮುಖ್ಯ : ಉದ್ಯಮಿ ರಾಜೇಂದ್ರ ಕುಮಾರ್ ಸಲಹೆ

blank

ಮೂಡುಬಿದಿರೆ: ನಮ್ಮ ಮಕ್ಕಳು ವಿದ್ಯೆ ಕಲಿತು ಒಳ್ಳೆಯ ಉದ್ಯೋಗ ದೊರಕಿಸಿಕೊಳ್ಳುವುದು ತಪ್ಪಲ್ಲ. ಅದರ ಜತೆಗೆ ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿ ಹವ್ಯಾಸವನ್ನಾಗಿ ಮಾಡಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ಉದ್ಯಮಿ ರಾಜೇಂದ್ರ ಕುಮಾರ್ ಹೇಳಿದರು.

ಸಮಾಜ ಮಂದಿರದಲ್ಲಿ ಶನಿವಾರ ನಡೆದ ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಎಸ್.ಪಿ., ಮಂಗಳೂರಿನ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಕೃಷಿ ವಿಭಾಗದ ಪ್ರಾಧ್ಯಾಪಕ ಡಾ.ರಾಹುಲ್ ಪಾಠಕ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸದಾನಂದ ನಾರಾವಿ ಸ್ವಾಗತಿಸಿದರು. ಕೃಷಿ ವಿಚಾರ ವಿನಿಮಯ ಕೇಂದ್ರ ಅಧ್ಯಕ್ಷ ಬಿ.ಅಭಯ ಕುಮಾರ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಹರೀಶ್ ಕೋಟ್ಯಾನ್ ವರದಿ ವಾಚಿಸಿದರು. ಗುಣಪಾಲ ಮುದ್ಯ ನಿರೂಪಿಸಿದರು. ರಾಜವರ್ಮ ಬೈಲಂಗಡಿ ವಂದಿಸಿದರು.

ರೈಲಿನಲ್ಲಿ ಬ್ಯಾಗ್ ಕಳವು

ಪೊಲೀಸ್ ಆಯುಕ್ತರ ವರ್ಗಾವಣೆಗೆ ಸಿಪಿಎಂ ಪಟ್ಟು : ಗುರುಪುರ ಕೈಕಂಬದ ಜಂಕ್ಷನ್‌ನಲ್ಲಿ ಪ್ರತಿಭಟನೆ

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…