ಬೆಳಗಾವಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಸದ್ಯ ಬೆಳಗಾವಿಯಲ್ಲಿ ನಡೆಸುತ್ತಿರುವ ಮಹತ್ವದ ಸಭೆ ಕುತೂಹಲವನ್ನು ಕೆರಳಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಹೈ ವೋಲ್ಟೇಜ್ ಸಭೆಯತ್ತ ರಾಜಕೀಯ ನಾಯಕರ ಗಮನ ಹರಿದಿದ್ದು, ಸಭೆಯಲ್ಲಿ ಚರ್ಚೆ ಆಗಲಿರುವ ವಿಷಯಗಳ ಕುರಿತು ಕೌತುಕ ಉಂಟಾಗಿಸಿದೆ.
ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳನ್ನು ಒಳಗೊಂಡಂತೆ ಈ ಸಭೆ ನಡೆಯುತ್ತಿದೆ. ಇದರಲ್ಲಿ ಹಾಲಿ ಹಾಗೂ ಮಾಜಿ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರೂ ಪಾಲ್ಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಅಂಗಡಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಸೇರಿ ಹಲವರು ಭಾಗಿಯಾಗಿದ್ದು, ಬೆಳಗಾವಿ ಜಿಲ್ಲಾ ಬಿಜೆಪಿ ಬಣ ರಾಜಕೀಯ ಈ ಸಭೆಯಲ್ಲಿ ಇತ್ಯರ್ಥವಾಗಲಿದೆಯೇ ಎಂಬ ಕುತೂಹಲವೂ ಉಂಟಾಗಿದೆ.
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್ಗಳೂ ಕ್ಲೋಸ್; ಎಲ್ಲಿ, ಯಾಕೆ?
ಗಂಡನ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಹೆಂಡ್ತಿ; ವಾಪಸ್ ಬಾ ಎಂದು ತವರಿಗೆ ಹೋಗಿ ಕರೆದಿದ್ದೇ ತಪ್ಪಾಯ್ತು!