ಬೆಂಗಳೂರು: ಮುಂಬೈ ಮೂಲದ ಧೃವ್ ಜತ್ತಿನ್ ಠಕ್ಕರ್(19) ಮೆಟ್ರೋ ಹಳಿಗೆ ಜಿಗಿದುವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಧೃವ್ ಜತ್ತಿನ್ ಠಕ್ಕರ್ ಗುರುವಾರ ಮಧ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ಬರುವಾಗ ಏಕಾಏಕಿ ಹಳಿಗೆ ಜಿಗಿದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಠಾಣೆ ಪೊಲೀಸರು, ಶುಕ್ರವಾರ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಮೃತ ಧೃವ್ ನಗರದ ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಬಿಎ-ಎಲ್ಎಲ್ಬಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೊದಲ ತ್ರೈಮಾಸಿಕ ಪರೀಕ್ಷೆಯಲ್ಲಿ ಎ-ಗ್ರೇಡ್ ಪಡೆದಿದ್ದ. ಎರಡನೇ ತ್ರೈಮಾಸಿಕ ಪರೀಕ್ಷೆಯಲ್ಲಿ ಸಿ-ಗ್ರೇಡ್ ಪಡೆದಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧೃವ್, ಕಡಿಮೆ ಅಂಕ ಗಳಿಸಿರುವ ಬಗ್ಗೆ ಪೋಷಕರಿಗೂ ತಿಳಿಸಿದ್ದ. ಹೀಗಾಗಿ ತಿಂಗಳ ಹಿಂದೆಯಷ್ಟೇ ತಂದೆ ಮುಂಬೈನಿಂದ ನಗರಕ್ಕೆ ಬಂದು ಧೃವ್ಗೆ ಚಿಕಿತ್ಸೆ ಕೊಡಿಸಿ ತೆರಳಿದ್ದರು.
ಧೃವ್ ಜತ್ತಿನ್ ಠಕ್ಕರ್ ಗುರುವಾರ ಮಧ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ಬರುವಾಗ ಏಕಾಏಕಿ ಹಳಿಗೆ ಜಿಗಿದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಠಾಣೆ ಪೊಲೀಸರು, ಶುಕ್ರವಾರ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಧೃವ್ ಈ ಮಾನಸಿಕ ಖಿನ್ನತೆಯಿಂದ ಹೊರಗೆ ಬಂದಿರಲಿಲ್ಲ. ಕೊನೆಗೆ ಆತ್ಮಹತ್ಯೆ ನಿರ್ಧಾರ ಮಾಡಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.