ಚಿಕ್ಕಮಗಳೂರು: ಈತ ಬೈಕ್ನಲ್ಲಿದ್ದ ತನ್ನ ಸಂಬಂಧಿಕರ ಮೇಲೆಯೇ ಗನ್ ಎತ್ತಿ ಶೂಟ್ ಮಾಡಿದ್ದಾನೆ. ಪರಿಣಾಮ ಬೈಕ್ನಲ್ಲಿದ್ದ ಇಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಈ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬಿದರೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರಕಾಶ್(30) ಹಾಗೂ ಪ್ರವೀಣ್ (33) ಎಂದು ಗುರುತಿಸಲಾಗಿದೆ. ಶೂಟ್ ಮಾಡಿದ ವ್ಯಕ್ತಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.
ಇದೀಗ ಶೂಟ್ ಮಾಡಿದ ವ್ಯಕ್ತಿ ಬುದ್ದಿ ಮಾಂಧ್ಯ ಎನ್ನಲಾಗುತ್ತಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಮೃತಪಟ್ಟ ಇಬ್ಬರು ಹಾಗೂ ರಮೇಶ್ ಸಂಬಂಧಿಕರು ಎನ್ನುವುದು ತಿಳಿದುಬಂದಿದೆ.
ಸದ್ಯ ಆರೋಪಿ ರಮೇಶನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಾ ಇದ್ದಾರೆ.