ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಲಾಕ್ಡೌನ್ ಜಾರಿಯಾಗಿತ್ತು. ಪರಿಣಾಮ ನಾಲ್ಕೂವರೆ ತಿಂಗಳಿನಿಂದ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದ್ದು, ಇದೀಗ ಆ.16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ.
ಹಂತಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ.
ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ವರ್ಕ್ ಫ್ರಮ್ ಹಾಸ್ಪಿಟಲ್
ಲಾಕ್ಡೌನ್ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ. ಮೆಟ್ರೋ ರೈಲು, ಚಿತ್ರಮಂದಿರಗಳು ಸೇರಿ ಇನ್ನಿತರ ಉದ್ಯಮಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಿಲ್ಲ. 15ರಂದು ಲಾಕ್ಡೌನ್ ತೆರವಿನ ಕುರಿತ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಗಳಿವೆ.
ಮೆಟ್ರೋ ರೈಲು ಸೇವೆ ಆರಂಭಿಸಲು ಅವಕಾಶ ಸಿಗುವ ಸಾಧ್ಯತೆ ಇರುವುದರಿಂದ ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲಸಕ್ಕೆ ಬರಲು ತಯಾರಿರುವಂತೆ ಸಿಬ್ಬಂದಿಗೆ ಈಗಾಗಲೇ ಸೂಚಿಸಿದೆ. ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ.
ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹಗಳು ಬೆಳ್ತಂಗಡಿಯ ಕಣಿಯೂರಿನಲ್ಲಿ ಪ್ರತಿಷ್ಠಾಪನೆ