25 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ‘ಮೈಕ್ರೋಸಾಫ್ಟ್’| Microsoft

blank

ಇಸ್ಲಾಮಾಬಾದ್ : ದೈತ್ಯ ತಂತ್ರಜ್ಞಾನ ಕಂಪನಿ ಮೈಕ್ರೋಸಾಫ್ಟ್ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದೆ. ಪಾಕಿಸ್ತಾನದ ತಂತ್ರಜ್ಞಾನ ವಲಯಕ್ಕೆ ಮಹತ್ವದ ಕ್ಷಣದಲ್ಲಿ, ಮೈಕ್ರೋಸಾಫ್ಟ್ ದೇಶದಲ್ಲಿ ತನ್ನ ಕಾರ್ಯಾಚರಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದೆ.
ಜಾಗತಿಕ ತಂತ್ರಜ್ಞಾನದ ದೈತ್ಯ ಮೈಕ್ರೋಸಾಫ್ಟ್, ಮಾರ್ಚ್ 7, 2000 ರಂದು ಪಾಕಿಸ್ತಾನದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಡಿಜಿಟಲ್ ರೂಪಾಂತರ ಮತ್ತು ಜಾಗತಿಕ ಪಾಲುದಾರಿಕೆಯ ಹೆಚ್ಚಿನ ಭರವಸೆಯೊಂದಿಗೆ ಪ್ರಾರಂಭವಾದ 25 ವರ್ಷಗಳ ಪ್ರಯಾಣವನ್ನು ಇದೀಗ ಕೊನೆಗೊಳಿಸಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ; 37 ಜನ ಸಾವು; ರೂ.400 ಕೋಟಿ ಮೌಲ್ಯದ ಆಸ್ತಿ ಹಾನಿ| heavy-rainfall

ಸಾಫ್ಟ್‌ವೇರ್ ದೈತ್ಯ ಸಂಸ್ಥೆ ಸದ್ದಿಲ್ಲದೆ ತನ್ನ ನಿರ್ಗಮನವನ್ನು ತಿಳಿಸಿದ್ದು, ಉದ್ಯೋಗಿಗಳಿಗೆ ಇತ್ತೀಚಿನ ದಿನಗಳಲ್ಲಿ ಕಂಪನಿ ಮುಚ್ಚುವಿಕೆಯ ಬಗ್ಗೆ ಔಪಚಾರಿಕವಾಗಿ ತಿಳಿಸಲಾಗಿದೆ. ಇದು ಸ್ಥಳೀಯ ಪ್ರತಿಭೆಗಳನ್ನು ಅಭಿವೃದ್ಧಿಪಡಿಸುವಲ್ಲಿ, ಉದ್ಯಮ ಪಾಲುದಾರಿಕೆಗಳನ್ನು ನಿರ್ಮಿಸುವಲ್ಲಿ ಮತ್ತು ವಲಯಗಳಲ್ಲಿ ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವಲ್ಲಿ ಮೈಕ್ರೋಸಾಫ್ಟ್ ಪ್ರಮುಖ ಪಾತ್ರ ವಹಿಸಿದ ಯುಗದ ಅಂತ್ಯವನ್ನು ಸೂಚಿಸುತ್ತದೆ.
ಸರ್ಕಾರಿ ವಲಯದಲ್ಲಿ ಮೈಕ್ರೋಸಾಫ್ಟ್ 200 ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ತಂತ್ರಜ್ಞಾನ ಪರಿಹಾರಗಳನ್ನು ಒದಗಿಸಿದೆ. ಇದಲ್ಲದೆ ಮೈಕ್ರೋಸಾಫ್ಟ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು ಮತ್ತು ಆನ್‌ಲೈನ್ ಕೋರ್ಸ್‌ಗಳನ್ನು ನೀಡುವಂತಹ ಉಪಕ್ರಮಗಳಲ್ಲಿಯೂ ತೊಡಗಿಸಿಕೊಂಡಿದೆ.

ಈ ನಿರ್ಧಾರಕ್ಕೆ ಕಾರಣವೇನು.?

ಇದನ್ನೂ ಓದಿ: ‘ಶೆಫಾಲಿ ಜರಿವಾಲಾ’ಗಾಗಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತಿ ಪರಾಗ್ ತ್ಯಾಗಿ| Shefali Jariwala

ಈ ಬಗ್ಗೆ ಮೈಕ್ರೋಸಾಫ್ಟ್ ಪಾಕಿಸ್ತಾನದ ಮಾಜಿ ಕಂಟ್ರಿ ಮ್ಯಾನೇಜರ್ ಜವಾದ್ ರೆಹಮಾನ್ ಮಾತನಾಡಿದ್ದು, ಕಂಪನಿಯ ಈ ನಿರ್ಧಾರ ವ್ಯವಹಾರಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. 2000 ರಿಂದ 2007 ರವರೆಗೆ ಕಂಪನಿಯೊಂದಿಗೆ ಸಂಬಂಧ ಹೊಂದಿದ್ದ ಜವಾದ್, ಕಂಪನಿಯ ಈ ನಿರ್ಧಾರವು ಪಾಕಿಸ್ತಾನದ ಪ್ರಸ್ತುತ ಸ್ಥಿತಿಯಲ್ಲಿ ದೊಡ್ಡ ಕಂಪನಿಗಳು ಕೆಲಸ ಮಾಡುವಲ್ಲಿ ತೊಂದರೆಗಳನ್ನು ಎದುರಿಸುತ್ತಿವೆ ಎಂದು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಆರಿಫ್ ಅಲ್ವಿ ಕಳವಳ

ಕಂಪನಿಯ ನಿರ್ಧಾರವು ಪಾಕಿಸ್ತಾನದ ಭವಿಷ್ಯದ ಬಗ್ಗೆ ಕಳವಳಕಾರಿಯಾಗಿದೆ ಎಂದು ಮಾಜಿ ಅಧ್ಯಕ್ಷ ಆರಿಫ್ ಅಲ್ವಿ ಹೇಳಿದ್ದಾರೆ. ರಾಜಕೀಯ ಅಸ್ಥಿರತೆ, ಆರ್ಥಿಕ ಅಸ್ಥಿರತೆ, ಆಗಾಗ್ಗೆ ಸರ್ಕಾರ ಬದಲಾವಣೆ, ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ, ಅಸ್ಥಿರ ಕರೆನ್ಸಿ ಮತ್ತು ವ್ಯಾಪಾರ ನೀತಿಗಳಿಂದಾಗಿ ಕಂಪನಿಗಳು ಪಾಕಿಸ್ತಾನದಲ್ಲಿ ಕೆಲಸ ಮಾಡುವುದು ಕಷ್ಟಕರವಾಗಿದೆ ಎಂದು ಅವರು ಬೇಸರ ಹೊರಹಾಕಿದ್ದಾರೆ.
(ಏಜೆನ್ಸೀಸ್)

ಆಷಾಢ ಶುಕ್ರವಾರ ಹಿನ್ನೆಲೆ ಪತ್ನಿಯೊಂದಿಗೆ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್| Darshan

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…