ಬೆಂಗಳೂರು: ಅನೀಶ್ಗೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಆದರೆ, ಅನೀಶ್ ಆಗಲೀ, ನಿರ್ದೇಶಕ ಅಭಿಷೇಕ್ ಶೆಟ್ಟ ಆಗಲೀ ನಾಯಕಿ ಯಾರಾಗಬಹುದೆಂಬ ರಹಸ್ಯವನ್ನು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರತಂಡದವರಿಂದಲೇ ನಾಯಕಿಯ ಬಗ್ಗೆ ಅಧಿಕೃತವಾಗಿ ಹೊರಬಿದ್ದಿದೆ.
ಇದನ್ನೂ ಓದಿ: ರೀಮೇಕ್ ಆಗ್ತಿದೆಯಂತೆ ‘ತೇಜಾಬ್’ … ಅನಿಲ್-ಮಾಧುರಿ ಪಾತ್ರಗಳಲ್ಲಿ ರಣವೀರ್, ಜಾಹ್ನವಿ?
‘ಆರಾಮ್ ಅರವಿಂದ್ ಸ್ವಾಮಿ’ ಒಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್ಗೆ ನಾಯಕಿಯಾಗಿ ಮಿಲನಾ ನಾಗರಾಜ್ ಚಿತ್ರತಂಡ ಸೇರ್ಪಡೆಯಾಗಿದ್ದಾರೆ. ಈಗಾಗಲೇ ಅವರ ಭಾಗದ ಚಿತ್ರೀಕರಣ ಸಹ ನಡೆದಿದೆ. ಮಲಯಾಳಿ ಟೀಚರ್ ಆಗಿ ಮಿಲನಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರಂತೆ.
ಈ ಹಿಂದೆ ‘ನಮ್ ಗಣಿ ಬಿಕಾಂ ಪಾಸ್’ ಮತ್ತು ‘ಗಜಾನನ ಅಂಡ್ ಗ್ಯಾಂಗ್’ ಚಿತ್ರಗಳನ್ನು ನಿರ್ದೇಶಿಸಿದ್ದ ಅಭಿಷೇಕ್ ಶೆಟ್ಟಿ, ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಸಹ ಅವರದ್ದೇ. ಈ ಹಿಂದೆ ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ನಿರ್ಮಿಸಿದ್ದ ಪ್ರಶಾಂತ್ ರೆಡ್ಡಿ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಘೋಷಣೆ ಇಲ್ಲ; ಅಭಿಮಾನಿಗಳಿಗೆ ‘ರಾಕಿಂಗ್ ಸ್ಟಾರ್’ ಪತ್ರ
ಈಗಾಗಲೇ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಎರಡನೆಯ ಹಂತದ ಚಿತ್ರೀಕರಣ ಶುರುವಾಗಲಿದೆಯಂತೆ. ಸದ್ಯದಲ್ಲೇ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಲಿದೆಯಂತೆ.
ಫ್ಯಾಮಿಲಿ ಜೊತೆ ದುಬೈಗೆ ಹಾರಿದ ಯಶ್ … ಬುರ್ಜ್ ಖಲೀಫಾ ಮೇಲೆ ಹೊಸ ಚಿತ್ರದ ಘೋಷಣೆ?