ಸಹಸ್ರಾರು ಮಕ್ಕಳ ಭವಿಷ್ಯ ಬೆಳಗಿದ ಗಾನಯೋಗಿ

blank

ಯಲಬುರ್ಗಾ: ಸಹಸ್ರಾರು ಸಂಖ್ಯೆಯ ಮಕ್ಕಳಿಗೆ ಸಂಗೀತ ಶಿಕ್ಷಣ ನೀಡಿ ಅವರ ಭವಿಷ್ಯ ಬೆಳಗಿದ ಪುಟ್ಟರಾಜ ಗವಾಯಿಗಳ ಆದರ್ಶ ಎಲ್ಲರೂ ಮೈಗೂಡಿಸಿಕೊಳ್ಳಿ ಎಂದು ಕುದರಿಮೋತಿಯ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಈ ರಾಶಿಯವರಿಗಿಂದು ಅಧಿಕ ಪ್ರಮಾಣದಲ್ಲಿ ಜ್ಞಾನ ವೃದ್ಧಿಯಾಗಲಿದೆ: ನಿತ್ಯಭವಿಷ್ಯ

ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಪಾರ್ವತಿ ಪರಮೇಶ್ವರ ದೇವಸ್ಥಾನ ಸೇವಾ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ಪಂಡಿತ್ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಧ ಅನಾಥ ಮಕ್ಕಳಿಗೆ ಪುಟ್ಟರಾಜರು ಜೀವನಪೂರ್ತಿ ಸಂಗೀತ ಜ್ಞ್ಞಾನ ನೀಡಿದರು. ಅಂಥ ಪುಣ್ಯ ಪುರುಷರ ಸ್ಮರಣೆ ಅಗತ್ಯ. ಮಹಾತ್ಮರ ನೆನಪಿಗಾಗಿ ಸಮಾಜದಲ್ಲಿ ಸೇವಾ ಕಾರ್ಯಗಳು ನಡೆಯಬೇಕು ಎಂದರು.

ಬೆಳಗಾವಿಯ ರಾಮದುರ್ಗದ ಮಾರುತೇಶ್ವರ ಭಜನಾ ಮಂಡಳಿ, ಕೊಪ್ಪಳದ ಟಣಕನಕಲ್ ಬಸವೇಶ್ವರ ಭಜನಾ ಮಂಡಳಿಯವರು ಭಜನಾ ಸೇವೆ ಸಲ್ಲಿಸಿದರು. ಗ್ರಾಮದ ಪ್ರಮುಖ ಬೀದಿಯಲ್ಲಿ ಪುಟ್ಟರಾಜ ಗವಾಯಿಗಳ ಭಾವಚಿತ್ರ ಮೆರವಣಿಗೆ ನಡೆಯಿತು.

ಗಣ್ಯರಾದ ಬಸವರಾಜ ಅಂಗಡಿ, ಗುರಪ್ಪ ಅಂಗಡಿ, ಶಿವರಡ್ಡಪ್ಪ, ರಾಯಣ್ಣ ಮಾಡ್ಲಿಗೇರ, ಕಳಕಪ್ಪ ದಿವಟರ, ನಿಂಗಪ್ಪ ಅಂಗಡಿ, ಶಂಕ್ರಪ್ಪ ಹೊಟ್ಟಿನ, ಎಸ್.ಎನ್.ಉಳ್ಳಾಗಡ್ಡಿ, ಕಲ್ಲಪ್ಪ ಹೊಟ್ಟಿನ, ಭರತರಡ್ಡಿ, ಕಲ್ಲಪ್ಪ ಗುರಿಕಾರ, ನಾಗರಾಜ ಪಟ್ಟೇದ, ಅಣ್ಣಾರಾವ್ ದೇಸಾಯಿ ಇದ್ದರು.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…