3 ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಚಾಲನೆ: ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿವೆ ತರಹೇವಾರಿ ಸಿರಿಧಾನ್ಯ

ಬೆಂಗಳೂರು: ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ’ಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಮೇಳದಲ್ಲಿ ಅಂದಾಜು 300ಕ್ಕೂ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ತರಹೇವಾರಿ ಸಿರಿಧಾನ್ಯಗಳು ಗ್ರಾಹಕರನ್ನು ಕೈಬಿಸಿ ಕರೆಯುತ್ತಿವೆ. ಕರ್ನಾಟಕ ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಮಣಿಪುರ, ಬಿಹಾರ ಸೇರಿ ದೇಶದ ವಿವಿಧ ರಾಜ್ಯಗಳಿಂದ ಸಿರಿಧಾನ್ಯ ಕಂಪನಿಗಳು ಅಭಿವೃದ್ಧಿಪಡಿಸಿರುವ ಉತ್ಪನ್ನಗಳನ್ನು ಮಳಿಗೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಮಳಿಗೆ ಸಿಬ್ಬಂದಿ ಸಿರಿಧಾನ್ಯ ಬಗ್ಗೆ ಜನರಿಗೆ ಅಗತ್ಯ ಮಾಹಿತಿ ನೀಡುತ್ತಿರುವುದು ಮೇಳದಲ್ಲಿ ಕಂಡಬಂತು. ಸಿರಿಧಾನ್ಯಗಳಿಂದ ರಾಶಿಪೂಜೆ ಆಲಂಕರಿಸಲಾಗಿತ್ತು. … Continue reading 3 ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಚಾಲನೆ: ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿವೆ ತರಹೇವಾರಿ ಸಿರಿಧಾನ್ಯ