More

    ಪಾದಯಾತ್ರೆಯೊಂದಿಗೆ ಕಾಮಗಾರಿ ಪರಿಶೀಲಿಸಿದ ಸಚಿವ ಕೋಟ

    ಕೋಟ: ಕೋಟತಟ್ಟು ಗ್ರಾಮಪಂಚಾಯಿತಿ ವ್ಯಾಪ್ತಿಯ ಪಡುಕರೆಯಿಂದ ಕೋಡಿ ಕನ್ಯಾಣದವರೆಗಿನ ಕರಾವಳಿ ರಸ್ತೆಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಿಫಾರಸ್ಸಿನ ಮೇರೆಗೆ ಅಂದಿನ ಮೀನುಗಾರಿಕಾ ಸಚಿವ, ಪ್ರಸ್ತುತ ಹಿಂದುಳಿದ ವರ್ಗಗಳ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ 7 ಕೋಟಿ ರೂ.ಬಿಡುಗಡೆಗೊಳಿಸಿದ ಕಾರಣ 5 ಕಿ.ಮೀ. ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಮಂಗಳವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾದಯಾತ್ರೆ ಮೂಲಕ ಸಂಚರಿಸಿ ಕಾಮಗಾರಿ ವೀಕ್ಷಿಸಿದರು.
    ರಸ್ತೆ ಕಾಮಗಾರಿ ನಿರ್ಮಿತಿ ಕೇಂದ್ರದ ವತಿಯಿಂದ ನಡೆದರೂ ಸ್ಥಳೀಯ ಮುಖಂಡ ಐರೋಡಿ ವಿಠ್ಠಲ್ ಪೂಜಾರಿ ವಿಶೇಷ ಕಾಳಜಿ ವಹಿಸಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.
    ಕೋಟತಟ್ಟು ಗ್ರಾಪಂ ಅಧ್ಯಕ್ಷ ಅಶ್ವಿನಿ ದಿನೇಶ್, ಸಾಲಿಗ್ರಾಮ ಪಟ್ಟಣಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಸದಸ್ಯೆ ರೇಖಾ ಕೇಶವ ಕರ್ಕೇರ, ಕೋಡಿ ಗ್ರಾಪಂ ಅಧ್ಯಕ್ಷ ಕೆ.ಪ್ರಭಾಕರ ಮೆಂಡನ್, ಕೋಟತಟ್ಟು ಗ್ರಾಪಂ ಉಪಾಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಪ್ರಕಾಶ್ ಹಂದಟ್ಟು ಸತೀಶ್ ಕುಂದರ್, ಪೂಜಾ ಪೂಜಾರಿ ಹಂದಟ್ಟು, ವಿದ್ಯಾ ಸಾಲಿಯಾನ್, ಸಾಹೀರಾಬಾನು, ರಾಬರ್ಟ್ ನಾಯ್ಕ, ಜ್ಯೋತಿ, ಸೀತಾ, ಪ್ರಮೋದ್ ಹಂದೆ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಉಡುಪಿಯ ಎಪಿಎಂಸಿ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಕೋಟತಟ್ಟು ಗ್ರಾಪಂ ಮಾಜಿ ಅಧ್ಯಕ್ಷ ರಘು ತಿಂಗಳಾಯ, ಬಿಜೆಪಿ ಕೋಟ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಐರೋಡಿ, ಕೋಟ ಗ್ರಾಪಂ ಸದಸ್ಯರಾದ ಸಂತೋಷ್ ಪ್ರಭು, ಚಂದ್ರ ಪೂಜಾರಿ, ಜಯರಾಮ ಶೆಟ್ಟಿ, ಸ್ಥಳೀಯ ಮುಖಂಡರಾದ ಕೇಶವ ಕರ್ಕೇರ, ಶಿವಮೂರ್ತಿ ಕೆ., ಶ್ರೀನಿವಾಸ ಪೂಜಾರಿ, ನಾಗೇಶ್ ಪೂಜಾರಿ, ಸತೀಶ ತೋಳಾರ್, ರಾಮಬಂಗೇರ, ಸುರೇಂದ್ರ ಕೋಡಿ, ಜಗನಾಥ್ ಅಮೀನ್, ಉದಯ್ ತಿಂಗಳಾಯ, ಚಂದ್ರ ಪುತ್ರನ್,ಉದಯ್ ತಿಂಗಳಾಯ ಪಡುಕರೆ, ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಣೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಸದಸ್ಯ ರವೀಂದ್ರ ತಿಂಗಳಾಯ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts