More

    2021ರಲ್ಲಿ ವಿಮಾನ ಟೇಕಾಫ್?

    ಶಿವಮೊಗ್ಗ: ಸೋಗಾನೆ ಸಮೀಪ ವಿಮಾನ ನಿಲ್ದಾಣ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿಗದಿತ ಸಮಯದಲ್ಲಿ ಎಲ್ಲ ಕಾಮಗಾರಿ ಮುಕ್ತಾಯಗೊಂಡರೆ 2021ರಲ್ಲೇ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

    ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಮೊದಲ ಹಂತದ ಕಾಮಗಾರಿಗೆ ಸರ್ಕಾರದಿಂದ ಕಾಯ್ದಿರಿಸಿದ 220 ಕೋಟಿಗಳಲ್ಲಿ 150 ಕೋಟಿ ರೂ. ವೆಚ್ಚದ ಕಾಮಗಾರಿ ಭರದಿಂದ ಸಾಗಿದೆ. ಕಚೇರಿ, ಕಟ್ಟಡ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕೆಲಸ ಆರಂಭಗೊಳ್ಳಲಿದೆ ಎಂದು ಹೇಳಿದರು.

    ಪ್ರಸ್ತುತ ರನ್​ವೇ, ಕಾಂಪೌಂಡ್ ಕಾಮಗಾರಿ ನಡೆಯುತ್ತಿದೆ. ಕಟ್ಟಡ ಕಾಮಗಾರಿ ಸದ್ಯವೇ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಕಾಮಗಾರಿಗಳಿಗೆ ಇನ್ನಷ್ಟು ವೇಗ ನೀಡಲಾಗುವುದು. ಈ ವಿಷಯಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

    ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಸದಸ್ಯರಾದ ಸುನೀತಾ ಅಣ್ಣಪ್ಪ, ಎಸ್.ಜ್ಞಾನೇಶ್ವರ್, ಮುಖ್ಯ ಇಂಜಿನಿಯರ್ ಕಾಂತರಾಜ್, ಎಇಇ ಕಿರಣ್​ಕುಮಾರ್, ರೈಟ್ಸ್ ವಿಮಾನಯಾನ ಸಂಸ್ಥೆ ಸಂಯೋಜಕ ರಾಜು, ಗುತ್ತಿಗೆದಾರ ಇಬ್ರಾಹಿಂ ಶರೀಫ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts