More

    ಸಚಿವ ಮಾಧುಸ್ವಾಮಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್​ವೈ

    ಬೆಂಗಳೂರು: ರೈತ ಮಹಿಳೆಯರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಇದನ್ನೂ ಓದಿ: VIDEO| ರೈತ ಮಹಿಳೆಯರನ್ನು ರಾಸ್ಕಲ್​ ಎಂದು ಜರಿದ ಸಚಿವ ಮಾಧುಸ್ವಾಮಿ

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲ ಬೆಳವಣಿಗೆಯನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಹೆಣ್ಣು ಮಗಳ ಬಗ್ಗೆ ಮಾಧುಸ್ವಾಮಿ ಹಾಗೇ ಮಾತಾಡಿದ್ದು ಸರಿಯಲ್ಲ. ನಾನು ಅವರಿಗೆ ಎಚ್ಚರಿಕೆ ನೀಡಿದ್ದೇನೆ. ಆ ಹೆಣ್ಣು ಮಗಳನ್ನು ಕರೆದು ನಾನು ಮಾತನಾಡುತ್ತೇನೆ ಎಂದರು.

    ಮಾಧುಸ್ವಾಮಿ ಅವರಿಂದ ರಾಜೀನಾಮೆ ಪಡೆಯಬೇಕೆಂಬ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಸಿಎಂ ಬಿಎಸ್​ವೈ ಪ್ರತಿಕ್ರಿಯೆ ನೀಡದೆ ಹೊರಟರು.

    ಇದನ್ನೂ ಓದಿ: ನನ್ನನ್ಯಾರೂ ತಬ್ಬಿಕೊಂಡು ಮುತ್ತು ಕೊಟ್ಟಿಲ್ಲ ಎಂದು ಸಚಿವ ಮಾಧುಸ್ವಾಮಿ ಟಾಂಗ್​ ನೀಡಿದ್ಯಾರಿಗೆ?

    ನಿನ್ನೆ ಕೋಲಾರ ತಾಲೂಕಿನ ಎಸ್​ ಅಗ್ರಹಾರ ಕೆರೆ ವೀಕ್ಷಿಸಲು ಆಗಮಿಸಿದ್ದ ವೇಳೆ ಅಹವಾಲು ಸಲ್ಲಿಸಲು ಬಂದಿದ್ದ ರೈತ ಮಹಿಳೆಯರಿಗೆ ಕಾನೂನು ಸಚಿವ ಮಾಧುಸ್ವಾಮಿ ರಾಸ್ಕಲ್​ ಎಂದು ಜರಿಯುವ ಮೂಲಕ ವಿವಾದ ಸೃಷ್ಟಿಸಿಕೊಂಡರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ಮಹಿಳೆಯರು ಮನವಿ ಮಾಡಿ ಚರ್ಚಿಸುವಾಗ ಹೇ ರಾಸ್ಕಲ್​ ಮುಚ್ಚುಬಾಯಿ ಎಂಬ ಪದ ಪ್ರಯೋಗ ಮಾಡಿದ್ದು, ಈ ವೇಳೆ ಕೆರಳಿದ ಮಹಿಳೆಯರು ಮಾಧುಸ್ವಾಮಿ ಅವರಿಗೆ ಘೇರಾವ್​ ಹಾಕಿದ ಪ್ರಸಂಗ ನಡೆಯಿತು. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಫ್ಯಾಶನ್​ ಡಿಸೈನರ್​ ಮಸಬಾರೊಂದಿಗೆ ಗೋವಾದಲ್ಲಿ ಲಾಕ್​ ಆಗಿರುವ ಬಾಲಿವುಡ್​ ನಟನ್ಯಾರು ಗೊತ್ತೇ?

    ಚೀನಾದಲ್ಲಿ ಮತ್ತೆ ಲಾಕ್​ಡೌನ್​: ಕರೊನಾ ಕುರಿತು ಮತ್ತೊಂದು ಶಾಕಿಂಗ್​ ವರದಿ ನೀಡಿದ ಚೀನಾ ವೈದ್ಯರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts