More

    ರಸ್ತೆಬದಿ ಊಟ ಸೇವಿಸಿದ ಸಚಿವ ಎಸ್.ಟಿ. ಸೋಮಶೇಖರ್!

    ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್, ಜನಸಾಮಾನ್ಯರಂತೆ ರಸ್ತೆ ಬದಿ ಊಟ ಸೇವಿಸಿದರು.

    ದೊಡ್ಡಬಿದರಕಲ್ಲು ವಾರ್ಡ್​ನಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಕುಳಿತು ಅನ್ನ, ರಸಂ ಸೇವಿಸಿದ ಸಚಿವರ ಸರಳತೆಯನ್ನು ಕಂಡು ಸಾರ್ವಜನಿಕರು ಅಚ್ಚರಿ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಕ್ಕಟ್ಟು: ಈ ಎರಡು ಕ್ಷೇತ್ರಗಳಲ್ಲಿ ಈಗ ತ್ರಿಕೋನ ಕದನ

    ಅಂಧ್ರಹಳ್ಳಿ, ದೊಡ್ಡಬಿದರಕಲ್ಲು ವಾರ್ಡ್ ನಲ್ಲಿ ಸೋಮಶೇಖರ್ ಪ್ರಚಾರ ನಡೆಸಿದರು. ಈ ವೇಳೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

    ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್, ವಾರ್ಡ್​ನ ಜನತೆ ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ. ಅತಿ ಹೆಚ್ಚು ಮತಗಳು ಈ ಭಾಗದಿಂದ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ದೊಡ್ಡಬಿದರಕಲ್ಲು 2ನೇ ಅತಿದೊಡ್ಡ ವಾರ್ಡ್ ಎನಿಸಿದ್ದು, ಬಹುತೇಕ ರಸ್ತೆಗಳಲ್ಲಿ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ, ರಾಜ ಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಸೋಮಶೇಖರ್ ಹೇಳಿದರು.

    ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ

    ಸಪ್ತಗಿರಿಗೌಡ ಪರ ಮೋಹನ್ ಭರ್ಜರಿ ಪ್ರಚಾರ

    ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಿಕ್ಕಟ್ಟು: ಈ ಎರಡು ಕ್ಷೇತ್ರಗಳಲ್ಲಿ ಈಗ ತ್ರಿಕೋನ ಕದನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts