blank

ನನ್ನ ಹೆಸರು ಹಾಳು ಮಾಡಲು ಕೆಲವರ ಹುನ್ನಾರ: ಸಚಿವ ವಿ.ಸೋಮಣ್ಣ ಆಕ್ರೋಶ

blank

ಬೆಂಗಳೂರು: ರಾಜ್ಯದಲ್ಲಿಯೇ ಗೋವಿಂದರಾಜನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುತ್ತಿದ್ದರೂ ಕೆಲವರು ನನ್ನ ಹೆಸರನ್ನು ಹಾಳು ಮಾಡುವುದಕ್ಕೆ ಹುನ್ನಾರ ನಡೆಸುತ್ತಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜೀವನದಲ್ಲಿ ಅನೇಕ ಏರುಪೇರುಗಳನ್ನು ನೋಡಿದ್ದೇನೆ. ಅಭಿವೃದ್ಧಿ ಕಾರ್ಯ ಮಾಡುವ ನನ್ನಂತಹ ಜನಪ್ರತಿನಿಧಿಗೆ ಅನ್ಯಾಯ ಮಾಡಬಾರದು. ಮಾನವೀಯತೆ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ 64 ಭಾಗಗಳಲ್ಲಿ ಜೀವದ ಹಂಗು ತೊರೆದು ವಿವಿಧ ಜನಪ್ರಿಯ ಅಭಿವೃದ್ಧಿ ಕಾರ್ಯ ಮಾಡಿದ್ದಾನೆ. ಇದರಿಂದ ಸಾವಿರಾರು ಜನರಿಗೂ ಅನುಕೂಲವಾಗಿದೆ. ರಾಜಕಾರಣ ಶಾಶ್ವತವಲ್ಲ, ಇಂದು ಬರುತ್ತದೆ ನಾಳೆ ಹೋಗುತ್ತದೆ. ಆದರೆ, ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಹೆಜ್ಜೆಗುರುತುಗಳಾಗಿ ಉಳಿಯಲಿವೆ. ಆದರೆ, ನಮ್ಮಂತಹವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಹಣ ಮತ್ತು ಜಾತಿಯಿಂದ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಸೋಮಣ್ಣ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

ಖಾಸಗಿ ಆಸ್ಪತ್ರೆಯಲ್ಲಿ ಒಂದು ಬಾರಿ ಡಯಾಲಿಸಿಸ್‌ಗೆ 4-5 ಸಾವಿರ ರೂ. ನೀಡಬೇಕಾಗುತ್ತದೆ. ಬಡ ಮತ್ತು ಮಧ್ಯಮದವರಿಗೆ ಉಚಿತವಾಗಿ ಸೇವೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಕ್ಷೇತ್ರದಲ್ಲಿ ಸುಸಜ್ಜಿತ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಆರಂಭಿಲಾಗಿದೆ. ಡಯಾಲಿಸಿಸ್ ಕೇಂದ್ರದಲ್ಲಿ 68 ಡಯಾಲಿಸಿಸ್ ಉಪಕರಣ ಅಳವಡಿಸಲು ಜಾಗದ ವ್ಯವಸ್ಥೆ ಇದೆ. ಎರಡು ಉಪಕರಣಗಳಿಂದ ಪ್ರಾರಂಭವಾಗಿದ್ದ ಈ ಕೇಂದ್ರದಲ್ಲಿ ಈಗ 42 ಉಪಕರಣಗಳನ್ನು ಅಳವಡಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಇದೆ. ಎಪಿಎಲ್ ಕಾರ್ಡ್ ಇರುವವರಿಗೆ 700 ರೂ. ಪಾವತಿಸಿದರೆ ಚಿಕಿತ್ಸೆ ಲಭ್ಯವಿದೆ. ಇದುವರೆಗೆ 20,100 ಮಂದಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳು ಡಯಾಲಿಸಿಸ್ ಸೇವೆ ಪಡೆದಿದ್ದಾರೆ ಎಂದು ಸೋಮಣ್ಣ ವಿವರಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಲಯ ಜಂಟಿ ಆಯುಕ್ತ ಲೋಕನಾಥ್, ಕ್ಲಿನಿಕಲ್ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ.ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ ಮತ್ತಿತರರಿದ್ದರು.

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…