ಬೆಂಗಳೂರು: ಸಚಿವ ಉಮೇಶ್ ಕತ್ತಿಗೆ ಹೃದಯಾಘಾತವಾಗಿದ್ದು, ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಅವರು ತಮ್ಮ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್ರೂಮ್ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ಗಮನ ಇರಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಐಸ್ಕ್ರೀಮ್ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..
ಗ್ರಾಮ ಪಂಚಾಯತ್ ಅಧ್ಯಕ್ಷನಿಗೇ ಬಾರಿಸಿದ ಗ್ರಾಮಸ್ಥರು; ಸಮಸ್ಯೆಗೆ ಸ್ಪಂದಿಸದ್ದಕ್ಕೆ ಸಿಟ್ಟಿನಿಂದ ಹೊಡೆದರು..