6 ತಿಂಗಳಿನಿಂದ ಪದೇಪದೆ ಅತ್ಯಾಚಾರ; ಕಾಮುಕನನ್ನು ಕೊಂದ ಬಾಲಕಿ..

blank

ಜೈಪುರ: ತಿಂಗಳುಗಳ ಕಾಲ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಾಲಕಿಯೊಬ್ಬಳು ಕೊಲೆ ಮಾಡಿದ್ದಾಳೆ. ಆರಂಭದಲ್ಲಿ ಸಹಜ ಸಾವು ಎಂದುಕೊಳ್ಳಲಾಗಿದ್ದ ಈ ಪ್ರಕರಣ ಆಶ್ಚರ್ಯಕರ ರೀತಿಯಲ್ಲಿ ತಿರುವು ಪಡೆದಿದ್ದು, ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ರಾಜಸ್ಥಾನದ ಆಳ್ವಾರ್ ಜಿಲ್ಲೆಯ ವಿಕ್ರಮ್​ ಯಾದವ್​ (45) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಈತನನ್ನು 13 ವರ್ಷದ ಬಾಲಕಿಯೊಬ್ಬಳು ಕೊಲೆ ಮಾಡಿದ್ದಳು. ಈ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದು, ಇಂದು ಬಾಲಕಿಯನ್ನು ವಶಕ್ಕೆ ಪಡೆದಿದ್ದು, ರಿಮಾಂಡ್ ಹೋಮ್​ಗೆ ಕಳಿಸಿದ್ದಾರೆ.

ಕೊಲೆಗೀಡಾದ ವ್ಯಕ್ತಿ ಆರು ತಿಂಗಳಿನಿಂದ ಬಾಲಕಿ ಮೇಲೆ ಆಗಾಗ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ, ಇತರ ಮೂವರೊಂದಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಬಾಲಕಿ ಆತನನ್ನು ಕೊಲೆ ಮೇ 17ರಂದು ಕೊಲೆ ಮಾಡಿದ್ದು, ಆರಂಭದಲ್ಲಿ ಅದನ್ನು ಸಹಜ ಸಾವು ಎಂದುಕೊಳ್ಳಲಾಗಿತ್ತು. ಆದರೆ ಕತ್ತಿನ ಭಾಗದಲ್ಲಿ ಕಲೆಯನ್ನು ಗಮನಿಸಿ ಅನುಮಾನದ ಮೇರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಕೊಲೆ ಎಂಬುದು ದೃಢಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ತನಿಖೆಗೆ ಇಳಿದ ಪೊಲೀಸರಿಗೆ ಮೊದಲಿಗೆ ಯಾವ ಸುಳಿವು ಕೂಡ ಸಿಕ್ಕಿರಲಿಲ್ಲ. ಆದರೆ ಕೊನೆಗೆ ಕೊಲೆಯಾದ ಸ್ಥಳದಲ್ಲಿ ಸಿಕ್ಕ ಬಟ್ಟೆಯ ಚೂರಿನ ಸುಳಿವಿನ ಮೇರೆಗೆ ತನಿಖೆ ಕೈಗೊಂಡಾಗ ಯಾದವ್ ಮನೆ ಬಳಿಯ ಬಾಲಕಿ ಮೇಲೆ ಅನುಮಾನ ಮೂಡಿತ್ತು. ಆಕೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ.

ವಿಕ್ರಮ್​ ಯಾದವ್ ಕಳೆದ ಆರು ತಿಂಗಳಿನಿಂದ ಆಗಾಗ ಅತ್ಯಾಚಾರ ಎಸಗಿದ್ದ. ಅಲ್ಲದೆ ಇನ್ನೊಬ್ಬರ ಜತೆ ದೈಹಿಕ ಸಂಪರ್ಕ ಹೊಂದುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ. ಇದರಿಂದ ಬೇಸತ್ತಿದ್ದ ಬಾಲಕಿ, ಮೇ 17ರಂದು ಆತ ತನ್ನ ಮನೆಗೆ ಬರುವಂತೆ ಹೇಳಿದ್ದಾಗ ಹೋಗಿದ್ದಳು. ಅಲ್ಲಿ ಆತ ಮದ್ಯದ ಅಮಲಿನಲ್ಲಿದ್ದು, ಆ ಸಂದರ್ಭದಲ್ಲಿ ಬಟ್ಟೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಜತೆಗೆ ಇತರ ನಾಲ್ವರ ವಿರುದ್ಧ ಗ್ಯಾಂಗ್​ರೇಪ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದು 49 ವರ್ಷಗಳಲ್ಲೇ ದಾಖಲೆಯ ಮಳೆ; ಎಲ್ಲಿ ಯಾವಾಗ?

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…