ಮೈಸೂರು: ದೇವಸ್ಥಾನಗಳನ್ನು ಹಾನಿಗೆಡವಿ ವಿಗ್ರಹಗಳನ್ನು ಧ್ವಂಸ ಮಾಡುವಂಥ ಇತಿಹಾಸ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮರುಕಳಿಸಿದ್ದು, ಕಿಡಿಗೇಡಿಗಳ ಈ ದುಷ್ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಮಠದ ಕಾವಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಎರಡು ದೇವಸ್ಥಾನಗಳಲ್ಲಿ ಈ ದುಷ್ಕೃತ್ಯ ಕಂಡು ಬಂದಿದೆ. ಇಲ್ಲಿನ ಸಿದ್ದಲಿಂಗೇಶ್ವರ ಹಾಗೂ ಮಹದೇಶ್ವರ ದೇವಸ್ಥಾನಗಳಿಗೆ ಹಾನಿ ಮಾಡಲಾಗಿದೆ.
ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!
ಈ ಎರಡೂ ದೇವಸ್ಥಾನಗಳ ಬಾಗಿಲು ಮುರಿದು ಒಳ ನುಗ್ಗಿರುವ ಕಿಡಿಗೇಡಿಗಳು ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಿಂಗಕ್ಕೆ ಹಾನಿ ಮಾಡಿದ್ದಾರೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಶೀಘ್ರ ಬಂಧಿಸಿ, ಕಟ್ಟುನಿಟ್ಟಿನ ಕಾನೂನುಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.
ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…