More

    ದೇವಸ್ಥಾನಗಳ ಬಾಗಿಲು ಮುರಿದು ಒಳಹೊಕ್ಕು ವಿಗ್ರಹಗಳ ಧ್ವಂಸ; ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

    ಮೈಸೂರು: ದೇವಸ್ಥಾನಗಳನ್ನು ಹಾನಿಗೆಡವಿ ವಿಗ್ರಹಗಳನ್ನು ಧ್ವಂಸ ಮಾಡುವಂಥ ಇತಿಹಾಸ ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮರುಕಳಿಸಿದ್ದು, ಕಿಡಿಗೇಡಿಗಳ ಈ ದುಷ್ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರು ಜಿಲ್ಲೆ ಕೆ.ಆರ್​.ನಗರ ತಾಲೂಕಿನ ಮಠದ ಕಾವಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಎರಡು ದೇವಸ್ಥಾನಗಳಲ್ಲಿ ಈ ದುಷ್ಕೃತ್ಯ ಕಂಡು ಬಂದಿದೆ. ಇಲ್ಲಿನ ಸಿದ್ದಲಿಂಗೇಶ್ವರ ಹಾಗೂ ಮಹದೇಶ್ವರ ದೇವಸ್ಥಾನಗಳಿಗೆ ಹಾನಿ ಮಾಡಲಾಗಿದೆ.

    ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

    ಈ ಎರಡೂ ದೇವಸ್ಥಾನಗಳ ಬಾಗಿಲು ಮುರಿದು ಒಳ ನುಗ್ಗಿರುವ ಕಿಡಿಗೇಡಿಗಳು ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಿಂಗಕ್ಕೆ ಹಾನಿ ಮಾಡಿದ್ದಾರೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಗ್ರಾಮಸ್ಥರು ಆರೋಪಿಗಳನ್ನು ಶೀಘ್ರ ಬಂಧಿಸಿ, ಕಟ್ಟುನಿಟ್ಟಿನ ಕಾನೂನುಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

    ಎರಡನೇ ಮದ್ವೆ ಆಗಲು ಹೆಂಡ್ತಿ-ಮಕ್ಳನ್ನು ಕೊಂದ, 11 ವರ್ಷಗಳ ಬಳಿಕ ಸಿಕ್ಕಿಬಿದ್ದ; ಈತ ತಪ್ಪಿಸಿಕೊಂಡಿದ್ದು, ಬಳಿಕ ಮಾಡಿದ್ದೆಲ್ಲ ಭಾರಿ ಕಿತಾಪತಿ!

    ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts