More

    ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಕಲ್ಲು ಹೊಡೆದ ದುಷ್ಕರ್ಮಿಗಳು; ಕಿಟಕಿ ಗಾಜುಗಳಿಗೆ ಹಾನಿ

    ಬೆಂಗಳೂರು: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದು ಹಾನಿ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರ ಕಂಟೋನ್ಮೆಂಟ್ ವಲಯದಲ್ಲಿ ನಡೆದಿದೆ. ಕಿಡಿಗೇಡಿಗಳು ಚೆನೈ- ಬೆಂಗಳೂರು- ಮೈಸೂರು ಮಾರ್ಗದಲ್ಲಿ ಸಂಚರಿಸುವ ರೈಲಿಗೆ ಕಲ್ಲು ಎಸೆದಿದ್ದಾರೆ.

    ಕಲ್ಲು ಎಸೆದ ರಭಸಕ್ಕೆ ರೈಲಿನ ಗಾಜುಗಳಿಗೆ ಹಾನಿಯುಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ ಎಂದು ವರದಿಯಾಗಿದೆ. ಈ ಘಟನೆ ನಿನ್ನೆ ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಬಳಿಕ ರೈಲಿನ ಸಿಬ್ಬಂದಿಗಳು ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಮೊಬೈಲ್​​ ಚಾರ್ಜರ್​ ಕಪ್ಪು, ಬಿಳಿ ಬಣ್ಣ ಇರುವ ಹಿಂದಿನ ಕಾರಣವೇನು ಗೊತ್ತಾ?

    ಘಟನೆಯಲ್ಲಿ ರೈಲಿನ ಎರಡು ಬೋಗಿಗಳ ನಾಲ್ಕು ಕಿಟಕಿ ಗಾಜುಗಳಿಗೆ ಹಾನಿಯುಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ, ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ರೈಲು ಸಂಚರಿಸುವ ಪ್ರಮುಖ ಜಂಕ್ಷನ್​ಗಳಲ್ಲಿ ಸ್ಥಳೀಯ ಪೊಲೀಸರು ಟ್ರ್ಯಾಕ್ ಪೆಟ್ರೋಲಿಂಗ್ ಮಾಡುತ್ತಿದ್ದಾರೆ. ಸದ್ಯ ರೈಲಿಗೆ ಹಾನಿಯುಂಟು ಮಾಡಿರುವ ಕಿಡಿಗೇಡಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts