More

    ಯುವತಿಯನ್ನು ರಸ್ತೆಯುದ್ದಕ್ಕೂ ಎಳೆದಾಡಿ, ಮೊಬೈಲ್ ಕಿತ್ತುಕೊಂಡು ಹೋದ ದುಷ್ಕರ್ಮಿಗಳು

    ಇಂದೋರ್​: ಯುವತಿಯೊಬ್ಬಳ ಫೋನ್​ ಕಿತ್ತುಕೊಂಡು ಆಕೆಯನ್ನು ರಸ್ತೆಯುದ್ದಕ್ಕೂ ಎಳೆದುಕೊಂಡ ಹೋದ ಭೀಕರ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

    ಇದನ್ನೂ ಓದಿ: ನನಗೆ ನಿದ್ದೆ ಬರುತ್ತಿಲ್ಲವೆಂದು ಕಣ್ಣೀರಿಟ್ಟ ನಟ ದುಲ್ಕರ್ ಸಲ್ಮಾನ್; ಭಾನುವಾರ ರಾತ್ರಿ ವಿಡಿಯೋ ಪೋಸ್ಟ್.. ತಕ್ಷಣ ಡಿಲೀಟ್

    ಯುವತಿಯನ್ನು ಪ್ರಾಂಜಲಿ ಸಿಂಗ್ ಬಘೇಲ್ ಎಂದು ಗುರುತಿಸಲಾಗಿದ್ದು, ಶಹದೋಲ್​ ಗ್ರಾಮದ ನಿವಾಸಿಯಾಗಿದ್ದಾಳೆ. ಯುವತಿಯು ರಸ್ತೆ ಬದಿ ಫೋನಿನಲ್ಲಿ ಮಾತನಾಡುತ್ತ ಹೋಗುವ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

    ಯುವತಿಯನ್ನು ರಸ್ತೆಯುದ್ದಕ್ಕೂ ಎಳೆದಾಡಿ, ಮೊಬೈಲ್ ಕಿತ್ತುಕೊಂಡು ಹೋದ ದುಷ್ಕರ್ಮಿಗಳು

    ಯುವತಿಯು ಎಂದಿನಂತೆ ಲಸುಡಿಯಾದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಳು. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಯುವತಿಯು ಮೊಬೈಲ್​​ನ್ನು ಗಟ್ಟಿಯಾಗಿ ಹಿಡಿದುಕೊಂಡ ಕಾರಣ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ರಸ್ತೆಯುದ್ಧಕ್ಕೂ ಎಳೆದಿದ್ದಾರೆ.ಈ ವೇಳೆ ಯುವತಿಯು ಮೊಬೈಲ್​ನ್ನು ಕೈಬಿಟ್ಟಿದ್ದು, ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಇನ್ನು ಘಟನೆಯ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಮೊಬೈಲ್ ದರೋಡೆ ನಡೆಸಿದ ದುಷ್ಕರ್ಮಿಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಗಳ ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts