ಕಡಲೂರು: ಡಿಎಂಕೆ ಪಕ್ಷದ ಕಾರ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ: ಅಂದಿದ್ದ 22 ಇಂಚಿನ ಸೊಂಟ ಈಗಿಲ್ಲ…ಹಳೆಯ ಫೋಟೋ ಸಮೇತ ಇಂಟರೆಸ್ಟಿಂಗ್ ಪೋಸ್ಟ್ ಹಾಕಿದ ನಟಿ!
ಭಾನುವಾರ ನಲ್ಲತ್ತೂರಿನಲ್ಲಿ ಡಿಎಂಕೆ ಪದಾಧಿಕಾರಿಯೊಬ್ಬರು ಆಯೋಜಿಸಿದ್ದ ಕುಟುಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ಜಿಲ್ಲಾ ಶಾಸಕ ಐಯಪ್ಪನ್ ಉಪಸ್ಥಿತರಿದ್ದರು. ಈ ವೇಳೆ ಮೋಟಾರ್ ಬೈಕ್ನಲ್ಲ ಬಂದ ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ.
ಶಾಸಕ ಐಯಪ್ಪನ್ ಇತ್ತೀಚಿಗೆ ಅನಾರೋಗ್ಯದ ಕಾರಣದಿಂದ ಇತ್ತೀಚೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸರಲಿಲ್ಲ. ಆದರೆ ಈ ಕಾರ್ಯಕ್ರಮಕ್ಕೆ ಶಾಸಕರು ಬಂದಿದ್ದರು. ಪೆಟ್ರೋಲ್ ಬಾಂಬ್ನಿಂದಾಗಿ ಯಾವುದೇ ಗಾಯಗಳು ವರದಿಯಾಗಿಲ್ಲ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು. ಶಾಸಕರನ್ನು ಸುರಕ್ಷಿತವಾಗಿ ಪ್ರದೇಶದಿಂದ ಹೊರಕ್ಕೆ ಕರೆದೊಯ್ದಿದ್ದಾರೆ. ಅಲ್ಲದೇ ಈ ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್)