More

    ಚುನಾವಣಾ ಚೆಕ್​ಪೋಸ್ಟ್​ನಲ್ಲಿ ಅವಘಡ; ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಚಿಕ್ಕೋಡಿ: ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೆಕ್​ಪೋಸ್ಟ್​ನಲ್ಲಿ ಮಳೆ ಸಂಬಂಧಿತ ಅವಘಡ ಸಂಭವಿಸಿದ್ದು, ಸೇನಾ ಸಿಬ್ಬಂದಿ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿ ಇರುವ ಚೆಕ್​ಪೋಸ್ಟ್​ನಲ್ಲಿ ಈ ಪ್ರಕರಣ ನಡೆದಿದೆ.

    ಇದನ್ನೂ ಓದಿ: ಸುಮ್ಮನಿರುವ ಇವರಿಗಿದೆ ಚುನಾವಣಾ ಫಲಿತಾಂಶವನ್ನೇ ಬದಲಿಸುವ ಶಕ್ತಿ!; ಇವರ್ಯಾರು?

    ನಿಪ್ಪಾಣಿ ಮೂರಗುಡ ಮಧ್ಯ ಈ ಚೆಕ್​ಪೋಸ್ಟ್ ಇದ್ದು, ಇಂದು ಸುರಿದ ಭಾರಿ ಗಾಳಿಮಳೆಗೆ ಚೆಕ್​ಪೋಸ್ಟ್​ನ ಛಾವಣಿ ಕಿತ್ತು ಹಾರಿ ಸಿಬ್ಬಂದಿ ಮೇಲೆ ಬಿದ್ದಿದ್ದರಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನಾ ಸಿಬ್ಬಂದಿ ಹಾಗೂ ತಾಲೂಕು ಆಡಳಿತದ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಗೆಲುವಿಗಾಗಿ ಗ್ಯಾಸ್ ಸಿಲಿಂಡರ್​ ಮೊರೆಹೋದ ಡಿ.ಕೆ.ಶಿವಕುಮಾರ್​; ಮೋದಿ ತಂತ್ರವನ್ನೇ ಅನುಸರಿಸಿದ ಕೆಪಿಸಿಸಿ!

    ಗಾಯಾಳುಗಳ ಪೈಕಿ ಒಬ್ಬ ಬೂದಿಹಾಳ ಗ್ರಾಮದ ವಾಟರ್​ಮ್ಯಾನ್ ಮಾರುತಿ ಪಾಟೀಲ ಎಂಬುದು ತಿಳಿದುಬಂದಿದೆ. ಇಬ್ಬರೂ ಗಾಯಾಳುಗಳನ್ನು ನಿಪ್ಪಾಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ಚುನಾವಣಾ ಚೆಕ್​ಪೋಸ್ಟ್​ನಲ್ಲಿ ಅವಘಡ; ಸೇನಾ ಸಿಬ್ಬಂದಿಗೆ ಗಂಭೀರ ಗಾಯ

    ಹನ್ನೊಂದರ ಈ ಹುಡುಗಿ ಐನ್​ಸ್ಟೀನ್​-ಸ್ಟೀಫನ್ ಹಾಕಿಂಗ್​ಗಿಂತಲೂ ಬುದ್ಧಿವಂತೆ!

    ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts