More

    ನಾಪತ್ತೆಯಾದ ಮಗುವಿನ ಶವ ಹೊಳೆಯಲ್ಲಿ ಪತ್ತೆ

    ಬೆಳ್ತಂಗಡಿ: ಮನೆಯಂಗಳದಿಂದ ದಿಢೀರ್ ಆಗಿ ನಾಪತ್ತೆಯಾಗಿದ್ದ ಎರಡೂವರೆ ವರ್ಷದ ಹೆಣ್ಣು ಮಗುವಿನ ಮೃತದೇಹ ಮನೆ ಸಮೀಪದ ಹೊಳೆ ನೀರಿನಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.
    ಸುಲ್ಕೇರಿ ಗ್ರಾಮದ ಜಂತಿಗೋಳಿ ಪರಾರಿ ನಿವಾಸಿ ಸುಚಿತ್ರಾ ಮತ್ತು ಸುಭಾಷ್ ದಂಪತಿ ಪುತ್ರಿ ಧೃತ್ವಿ ಅಸುನೀಗಿದ ಮಗು.

    ತಮ್ಮ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಅಜ್ಜ ಸಂಜೀವ ಶೆಟ್ಟಿ ಅವರೊಂದಿಗೆ ಮನೆಯಲ್ಲಿ ಬಿಟ್ಟು ಸುಚಿತ್ರಾ ತಾಯಿಯೊಂದಿಗೆ ಹುಲ್ಲು ತರಲೆಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೇ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು, ಮಗುವಿನ ಸುಳಿವು ಪತ್ತೆಯಾಗಿರಲಿಲ್ಲ. ಮನೆಯಿಂದ 100 ಮೀ. ಅಂತರದಲ್ಲಿ ಹೊಳೆಯೊಂದು ಹರಿಯುತ್ತಿದ್ದು, ಮಗು ಆ ಕಡೆಗೇನಾದರೂ ಹೋಗಿರಬಹುದೇ ಎಂಬ ಶಂಕೆ ಮೂಡಿತ್ತು.

    ಬೆಳ್ತಂಗಡಿ ಅಗ್ನಿಶಾಮಕ ದಳ, ವಿವಿಧ ಕಡೆಯ ಮುಳುಗು ತಜ್ಞರು ಹಾಗೂ ಸ್ಥಳೀಯರು ತಡರಾತ್ರಿಯವರೆಗೂ ಹೊಳೆ ನೀರಿನಲ್ಲಿ ಹುಡುಕಾಟ ನಡೆಸಿ ಬಳಿಕ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಮುಂದುವರಿಸಿದ್ದರು. ಈ ಸಂದರ್ಭ ಮನೆ ಸಮೀಪದ ಹೊಳೆಯಿಂದ 500 ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಆಟವಾಡುತ್ತಾ ಮಗು ಹೊಳೆ ಬದಿಗೆ ತೆರಳಿ ಆಕಸ್ಮಿಕವಾಗಿ ನೀರಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts