ಶ್ರೀನಗರ: ಭಾರತೀಯ ಸೇನೆಯ ಯೋಧನೋರ್ವ ಜಮ್ಮುಕಾಶ್ಮೀರದ ಕುಲಗಾಂವ್ ಪ್ರದೇಶದಿಂದ ನಿನ್ನೆಯಿಂದ ನಾಪತ್ತೆಯಾಗಿದ್ದಾರೆ. ಈ ಯೋಧನನ್ನು ಉಗ್ರರೇ ಅಪಹರಣ ಮಾಡಿದ್ದಾಗಿ ಸೇನೆ ಇಂದು ಶಂಕೆ ವ್ಯಕ್ತಪಡಿಸಿದೆ.
ಕಳೆದು ಹೋಗಿರುವ ಯೋಧನಿಗಾಗಿ ಸೇನೆ ಹುಡುಕಾಟ ಶುರು ಮಾಡಿದ್ದು, ಇಂದು ಹೇಳಿಕೆಯೊಂದನ್ನೂ ಬಿಡುಗಡೆ ಮಾಡಿದೆ.
162 ಬೆಟಾಲಿನ್ನ ರೈಫಲ್ಮೆನ್ ಶಕೀರ್ ಮಂಜೂರ್ ಭಾನುವಾರ ಸಂಜೆ 5ಗಂಟೆಯಿಂದಲೂ ನಾಪತ್ತೆಯಾಗಿದ್ದಾರೆ. ಕುಲಗಾಂವ್ ಬಳಿ ಅವರ ಕಾರು ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಉಗ್ರರೇ ಶಕೀರ್ ಅವರನ್ನು ಅಪಹರಣ ಮಾಡಿರುವ ಶಂಕೆ ಇದೆ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಭೂಮಿಪೂಜೆಗೆ ಎಲ್.ಕೆ.ಆಡ್ವಾಣಿಯವರಿಗೆ ಏಕಿಲ್ಲ ಆಹ್ವಾನ? ಇಲ್ಲಿದೆ ನೋಡಿ ನಿಜವಾದ ಕಾರಣ
ಶಕೀರ್ ಅವರು ಈದ್ ಹಬ್ಬ ಆಚರಿಸಲೆಂದು ಶೋಪಿಯಾನ ಜಿಲ್ಲೆಯಲ್ಲಿರುವ ಮನೆಗೆ ಬಂದಿದ್ದರು. ಹಬ್ಬದ ನಿಮಿತ್ತ ನಿನ್ನೆ ಸಂಜೆ ಅವರು ಕುಟುಂಬದೊಂದಿಗೆ ಹೊರಗೆ ಹೊರಟಿದ್ದರು. ಅದಾದ ಮೇಲೆಯೇ ಕಾಣೆಯಾಗಿದ್ದಾರೆ ಎನ್ನಲಾಗಿದೆ.
ಭದ್ರತಾ ಸಿಬ್ಬಂದಿ ಶೋಪಿಯಾನ್, ಕುಲಗಾಂವ್, ಅನಂತ್ನಾಗ್ ಜಿಲ್ಲೆಗಳಲ್ಲಿ ಕಳೆದು ಹೋದ ಯೋಧನಿಗಾಗಿ ಹುಡುಕುತ್ತಿದ್ದಾರೆ. ಅಷ್ಟೇ ಅಲ್ಲ, ಸ್ಥಳೀಯ ಪೊಲೀಸರು ಡ್ರೋನ್, ಸ್ನಿಫರ್ ಶ್ವಾನಗಳನ್ನು ಬಳಸಿ ಹುಡುಕುತ್ತಿದ್ದಾರೆ. ಶಕೀರ್ ಅವರನ್ನು ಹೇಗಾದರೂ ಸುರಕ್ಷಿತವಾಗಿ ಮನೆಗೆ ವಾಪಸ್ ಕರೆತನ್ನಿ ಎಂದು ಅವರ ಕುಟುಂಬದವರು ಮನವಿ ಮಾಡಿದ್ದಾರೆ. (ಏಜೆನ್ಸೀಸ್)
‘ಪ್ರೀತಿಸುವುದನ್ನು..ಸತ್ಯ ಹೇಳುವುದನ್ನು, ತಾಳ್ಮೆಯಿಂದ ಇರುವುದನ್ನು ಕಲಿತಿದ್ದೇ ನನ್ನ ಸೋದರನಿಂದ…’