ಭಾರತೀಯ ಸೇನೆಯ ಯೋಧನೋರ್ವ ನಿಗೂಢವಾಗಿ ನಾಪತ್ತೆ; ಕಾರು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಶ್ರೀನಗರ: ಭಾರತೀಯ ಸೇನೆಯ ಯೋಧನೋರ್ವ ಜಮ್ಮುಕಾಶ್ಮೀರದ ಕುಲಗಾಂವ್​ ಪ್ರದೇಶದಿಂದ ನಿನ್ನೆಯಿಂದ ನಾಪತ್ತೆಯಾಗಿದ್ದಾರೆ. ಈ ಯೋಧನನ್ನು ಉಗ್ರರೇ ಅಪಹರಣ ಮಾಡಿದ್ದಾಗಿ ಸೇನೆ ಇಂದು ಶಂಕೆ ವ್ಯಕ್ತಪಡಿಸಿದೆ. ಕಳೆದು ಹೋಗಿರುವ ಯೋಧನಿಗಾಗಿ ಸೇನೆ ಹುಡುಕಾಟ ಶುರು ಮಾಡಿದ್ದು, ಇಂದು ಹೇಳಿಕೆಯೊಂದನ್ನೂ ಬಿಡುಗಡೆ ಮಾಡಿದೆ. 162 ಬೆಟಾಲಿನ್​ನ ರೈಫಲ್​ಮೆನ್​ ಶಕೀರ್​ ಮಂಜೂರ್​ ಭಾನುವಾರ ಸಂಜೆ 5ಗಂಟೆಯಿಂದಲೂ ನಾಪತ್ತೆಯಾಗಿದ್ದಾರೆ. ಕುಲಗಾಂವ್​ ಬಳಿ ಅವರ ಕಾರು ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಉಗ್ರರೇ ಶಕೀರ್​ ಅವರನ್ನು ಅಪಹರಣ ಮಾಡಿರುವ ಶಂಕೆ ಇದೆ. ಅವರಿಗಾಗಿ ಹುಡುಕಾಟ ನಡೆದಿದೆ … Continue reading ಭಾರತೀಯ ಸೇನೆಯ ಯೋಧನೋರ್ವ ನಿಗೂಢವಾಗಿ ನಾಪತ್ತೆ; ಕಾರು ಸುಟ್ಟ ಸ್ಥಿತಿಯಲ್ಲಿ ಪತ್ತೆ