More

    ಲಸಿಕೆ ಪಡೆದ ಶಾಸಕ ಅಶೋಕ್ ನಾಯ್ಕ

    ಶಿವಮೊಗ್ಗ: ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೊನಾ ಲಸಿಕೆ ಪಡೆದರು.
    45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕರೊನಾ ಲಸಿಕೆ ಲಭ್ಯವಿದ್ದು, ದಯವಿಟ್ಟು ಅರ್ಹ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ಲಸಿಕೆಯನ್ನು ಪಡೆಯಬೇಕೆಂದು ವಿನಂತಿಸಿಕೊಂಡರು. ವಿಶ್ವದಲ್ಲೆಡೆ ತಲ್ಲಣ ಸೃಷ್ಟಿಸಿದ ಕರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗವಾಗಿದೆ. ಲಸಿಕೆ ಪಡೆಯಲು ಯಾರೂ ಭಯಪಡಬೇಕಾಗಿಲ್ಲ. ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದರು.
    ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಶ್ರೀಧರ್ ಮತ್ತು ಲಸಿಕಾ ಅಧಿಕಾರಿ ಡಾ. ನಾಗರಾಜ್ ನಾಯಕ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts