More

    ಶಾಸಕ ಅರವಿಂದ ಬೆಲ್ಲದರಿಂದ ಸಿಎಂಗೆ ಪತ್ರ; ಮತ್ತೆ ಪ್ರತ್ಯೇಕ ಮಹಾನಗರ ಪಾಲಿಕೆ ಕೂಗು

    ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಕೂಗು ಮತ್ತೊಮ್ಮೆ ಕೇಳಿಬಂದಿದೆ. ಹು-ಧಾ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಪ್ರತ್ಯೇಕ ಮಹಾನಗರ ಪಾಲಿಕೆಗೆ ಆಗ್ರಹಿಸಿದ್ದಾರೆ.
    ಹು-ಧಾ ಮಹಾನಗರ ಪಾಲಿಕೆಯು ರಾಜ್ಯದ ೨ನೇ ದೊಡ್ಡ ಪಾಲಿಕೆಯಾಗಿದೆ. ಈ ಪ್ರದೇಶವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಅವಳಿನಗರದ ಹಲವಾರು ಹಳ್ಳಿಗಳು ಮಹಾನಗರ ಪಾಲಿಕೆಗೆ ಹತ್ತಿರವಾಗುತ್ತಿವೆ. ಕೈಗಾರಿಕೆ, ವಸತಿ, ಶಿಕ್ಷಣ ಕ್ಷೇತ್ರಗಳು ಸೇರಿ ಜನಸಂಖ್ಯೆ ಹೆಚ್ಚುತ್ತಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಯಾಗುವುದರಿಂದ ಸಾರ್ವಜನಿಕ ಸಮಸ್ಯೆಗಳು ಶೀಘ್ರ ಇತ್ಯರ್ಥಗೊಳ್ಳಲಿವೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಪ್ರತ್ಯೇಕ ಪಾಲಿಕೆ ಹಲವಾರು ಸಂಘಟನೆಗಳ ಬೇಡಿಕೆ ಕೂಡ ಆಗಿದೆ. ಸಾರ್ವಜನಿಕ ಹಿತದೃಷ್ಟಿ ಹಾಗೂ ಧಾರವಾಡದ ಸರ್ವತೋಮುಖ ಅಭಿವೃದ್ಧಿಯನ್ನು ಗಣನೆಗೆ ತೆಗೆದುಕೊಂಡು ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪಿಸಬೇಕು ಎಂದು ಅರವಿಂದ ಬೆಲ್ಲದ ಪತ್ರದಲ್ಲಿ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts