More

    ‘ನನ್ನ ಕೊಲೆಗೆ ಸುಪಾರಿ ನೀಡಿದ್ದಾರೆ’ ಎಂದಿದ್ದ ಸುರೇಶ್​ ಗೌಡ ವಿರುದ್ಧ ಶಾಸಕ ಗೌರಿಶಂಕರ್​ ದೂರು

    ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಅರೆಯೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಸುರೇಶ್ ಗೌಡ, ಗೌರಿಶಂಕರ್ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಸ್ಫೋಟಕ ಹೇಳಿಕೆ ನೀಡಿದ್ದರು. ‘ನನ್ನ ಕೊಲೆ ಮಾಡಿಸೋದಿಕ್ಕೆ ನೀನು ಸಜ್ಜಾಗಿದ್ದೀಯಾ. ನನ್ನನ್ನು ಕೊಲ್ಲಲು ಜೈಲಲ್ಲಿ ಇರೋರಿಗೆ ಸುಪಾರಿ ಕೊಡ್ತೀಯಾ…’ ಎಂದು ಹೇಳಿ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದರು.

    ಇದೀಗ ಮಾಜಿ ಶಾಸಕನ ವಿರುದ್ಧ ತುಮಕೂರು ಎಸ್.ಪಿಗೆ ಶಾಸಕ ಗೌರಿಶಂಕರ್ ದೂರು ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತುಮಕೂರು ಗ್ರಾಮಾಂತರ ಕ್ಷೇತ್ರದ ಅರೆಯೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ‘ಶಾಸಕ ಗೌರಿಶಂಕರ್ ನನ್ನ ಕೊಲೆಗೆ ರೌಡಿಶೀಟರ್ ಒಬ್ಬನಿಗೆ 5 ಕೋಟಿಗೆ ಸುಪಾರಿ ನೀಡಿದ್ದಾರೆ’ ಎಂದು ಬಹಿರಂಗವಾಗಿ ವೇದಿಕೆ ಮೇಲೆ ಗೌರಿಶಂಕರ್ ವಿರುದ್ದ ಗಂಭೀರ ಆರೋಪ‌ ಮಾಡಿದ್ದರು. ಸುರೇಶ್ ಗೌಡ.

    'ನನ್ನ ಕೊಲೆಗೆ ಸುಪಾರಿ ನೀಡಿದ್ದಾರೆ' ಎಂದಿದ್ದ ಸುರೇಶ್​ ಗೌಡ ವಿರುದ್ಧ ಶಾಸಕ ಗೌರಿಶಂಕರ್​ ದೂರುತುಮಕೂರು ಗ್ರಾಮಾಂತರ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ ಗೌರಿಶಂಕರ್, ‘ನನ್ನ ವಿರುದ್ಧ ಇದೊಂದು ಸುಳ್ಳು ಆರೋಪ. ನನ್ನ ತೆಜೋವಧೆ ಮಾಡಲು ಈ ರೀತಿಯ ಸುಳ್ಳು ಆರೋಪ ಮಾಡುತ್ತಿರುವ ಸುರೇಶ್ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮಾಜಿ ಶಾಸಕ ಸುರೇಶ್ ಗೌಡರಿಂದ ನನಗೆ ಹಾಗೂ ನನ್ನ ಕಾರ್ಯಕರ್ತರಿಗೆ ಜೀವ ಭಯವಿದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಾಜಿ ಶಾಸಕ ಗೌರಿಶಂಕರ್​, ತುಮಕೂರು ಎಸ್ ಪಿ, ಸಿಎಂ ಹಾಗೂ ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದು ಕೂಡಲೇ ಈ ಪ್ರಕರಣವನ್ನ ಸಿಓಡಿ ತನಿಖೆಗೆ ಒಪ್ಪಿಸಿ ಸುರೇಶ್ ಗೌಡ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts