ದಾವಣಗೆರೆ: ವ್ಯಕ್ತಿಯೊಬ್ಬ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಹೋರಾಟದಲ್ಲಿದ್ದಾಗ ಶಾಸಕರೊಬ್ಬರು ತಾವು ಸಂಚರಿಸುತ್ತಿದ್ದ ವಾಹನದಲ್ಲಿ ಆತನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸುವಲ್ಲಿ ನೆರವಾಗಿದ್ದಾರೆ.
ದಾವಣಗೆರೆ ಜಿಲ್ಲೆ ಹರಿಹರದ ದೀಟೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮಪ್ಪ ಇದಕ್ಕೆ ಸಾಕ್ಷಿಯಾಗಿದ್ದಾರೆ. ದೀಟೂರು ಗ್ರಾಮದ ಬಸವರಾಜ್ (30) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು ಆಂಬುಲೆನ್ಸ್ಗಾಗಿ ಕಾಯುತ್ತಿದ್ದರು.
ಈ ಸಂದರ್ಭದಲ್ಲಿ ಕೊಂಡಜ್ಜಿ ಗ್ರಾಮದಲ್ಲಿ ಬಾಗಿನ ಅರ್ಪಿಸಿ ಅದೇ ದಾರಿಯಾಗಿ ಸಾಗುತ್ತಿದ್ದ ಶಾಸಕ ಎಸ್.ರಾಮಪ್ಪ, ಇದನ್ನು ಗಮನಿಸಿ ನೆರವಾಗಿದ್ದಾರೆ. ತಾವು ಸಂಚರಿಸುತ್ತಿದ್ದ ವಾಹನದಲ್ಲೇ ಆ ವ್ಯಕ್ತಿಯನ್ನು ಕರೆದೊಯ್ದು ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವ ಮೂಲಕ ಸ್ಥಳೀಯರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.
ರೋಗಿ ಎಚ್ಚರವಿರುವಾಗಲೇ ನಡೆಯಿತು ಮಿದುಳಿನ ಶಸ್ತ್ರಚಿಕಿತ್ಸೆ; ಸರ್ಜರಿ ನಡೆಯುವಾಗ ಗಾಯತ್ರಿ ಮಂತ್ರ ಪಠನೆ
ಅಮಾವಾಸ್ಯೆ ಎಂದರೆ ಸಾಕು ಈ ಮನೆಯವರಿಗೇನೋ ದುಗುಡ; ಮಾಟ-ಮಂತ್ರ ಮಾಡಿಸುತ್ತಿರುವುದ್ಯಾರು ಎಂಬುದಿನ್ನೂ ನಿಗೂಢ..