More

    ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನನ್ನು ತಾವು ಸಂಚರಿಸುತ್ತಿದ್ದ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ದ ಶಾಸಕ

    ದಾವಣಗೆರೆ: ವ್ಯಕ್ತಿಯೊಬ್ಬ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಹೋರಾಟದಲ್ಲಿದ್ದಾಗ ಶಾಸಕರೊಬ್ಬರು ತಾವು ಸಂಚರಿಸುತ್ತಿದ್ದ ವಾಹನದಲ್ಲಿ ಆತನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸುವಲ್ಲಿ ನೆರವಾಗಿದ್ದಾರೆ.

    ದಾವಣಗೆರೆ ಜಿಲ್ಲೆ ಹರಿಹರದ ದೀಟೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್​. ರಾಮಪ್ಪ ಇದಕ್ಕೆ ಸಾಕ್ಷಿಯಾಗಿದ್ದಾರೆ. ದೀಟೂರು ಗ್ರಾಮದ ಬಸವರಾಜ್ (30) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು ಆಂಬುಲೆನ್ಸ್​ಗಾಗಿ ಕಾಯುತ್ತಿದ್ದರು.

    ಈ ಸಂದರ್ಭದಲ್ಲಿ ಕೊಂಡಜ್ಜಿ ಗ್ರಾಮದಲ್ಲಿ ಬಾಗಿನ ಅರ್ಪಿಸಿ ಅದೇ ದಾರಿಯಾಗಿ ಸಾಗುತ್ತಿದ್ದ ಶಾಸಕ ಎಸ್​.ರಾಮಪ್ಪ, ಇದನ್ನು ಗಮನಿಸಿ ನೆರವಾಗಿದ್ದಾರೆ. ತಾವು ಸಂಚರಿಸುತ್ತಿದ್ದ ವಾಹನದಲ್ಲೇ ಆ ವ್ಯಕ್ತಿಯನ್ನು ಕರೆದೊಯ್ದು ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವ ಮೂಲಕ ಸ್ಥಳೀಯರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

    ರೋಗಿ ಎಚ್ಚರವಿರುವಾಗಲೇ ನಡೆಯಿತು ಮಿದುಳಿನ ಶಸ್ತ್ರಚಿಕಿತ್ಸೆ; ಸರ್ಜರಿ ನಡೆಯುವಾಗ ಗಾಯತ್ರಿ ಮಂತ್ರ ಪಠನೆ

    ಅಮಾವಾಸ್ಯೆ ಎಂದರೆ ಸಾಕು ಈ ಮನೆಯವರಿಗೇನೋ ದುಗುಡ; ಮಾಟ-ಮಂತ್ರ ಮಾಡಿಸುತ್ತಿರುವುದ್ಯಾರು ಎಂಬುದಿನ್ನೂ ನಿಗೂಢ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts