More

    ನುಡಿದಂತೆ ನಡೆದ ಏಕೈಕ ಸರ್ಕಾರ ನಮ್ಮದು

    ಮದ್ದೂರು: ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ರಾಜ್ಯದ ಜನರಿಗೆ ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

    ತಾಲೂಕಿನ ಬೆಸಗರಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ಬಿರುಸಿನ ಪ್ರಚಾರ ನಡೆಸಿ ಮಾತನಾಡಿದರು.

    ದೇಶದಲ್ಲಿ ನುಡಿದಂತೆ ನಡೆದ ಏಕೈಕ ಸರ್ಕಾರವೆಂದರೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಾಗಿದೆ. ಲೋಕಸಭಾ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಅಧಿಕಾರಕ್ಕೆ ಬಂದ ತಕ್ಷಣ ಅವುಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
    ಈಗಾಗಲೇ ಮದ್ದೂರು ವಿಧಾನಸಭಾ ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ತಂದು ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದು, ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಅವರನ್ನು ಗೆಲ್ಲಿಸಿದರೆ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಸಹಾಯವಾಗುತ್ತದೆ ಎಂದರು.

    ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಶಾಸಕ ಕೆ.ಎಂ.ಉದಯ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು. ನಂತರ ಬೆಸಗರಹಳ್ಳಿ ಮಸೀದಿಯಲ್ಲಿ ಮುಸ್ಲಿಮರೊಂದಿಗೆ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡರು.

    ಗ್ರಾಪಂ ಸದಸ್ಯರಾದ ಬಾಬು ಎಂ.ಆರ್.ಕಾಳೇಗೌಡ, ಮುರಳೀಧರ್, ಪ್ರಸನ್ನ, ಮುಖಂಡರಾದ ಪಣ್ಣೆದೊಡ್ಡಿ ಧನಂಜಯ, ಸುಧಾಕರ್, ಕೆರೆಮೇಗಲದೊಡ್ಡಿ ಶೇಖರ, ಬಾಬು, ಸುರೇಂದ್ರ, ಸಯ್ಯದ್, ಕೋಣಸಾಲೆ ಸಿದ್ದು, ಮಹಮದ್ ಇಲಿಯಾಜ್, ಸಯ್ಯದ್ ಉಕ್ಮಾನ್, ಶಹಬಾಜ್ ಖಾನ್, ಫರಾಜ್ ಪಾಷ, ಶಫಿವುಲ್ಲಾಬೇಗ್, ಅಪ್ತಾಪ್ ಪಾಷ, ಶಾಕೀಬ್, ಬಾದಲ್, ಅಹಮ್ಮದ್ ಪಾಷ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts