ವಿಜಯಪುರ: ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಂಗಮೇಶ್ವರ ದೇವಸ್ಥಾನದ ಜಾತ್ರೋತ್ಸವ ನಿಮಿತ್ತ ಶುಕ್ರವಾರ ಗ್ರಾಮಕ್ಕೆ ತೆರಳಿದ್ದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಮುಖಂಡ ಸಂಗಮೇಶ ಬಬಲೇಶ್ವರ, ಕುಮಾರ ದೇಸಾಯಿ, ಬಸವರಾಜ ದೇಸಾಯಿ, ಸೋಮನಾಥ ಬಿರಾದಾರ, ಮಲ್ಲಿಕಾರ್ಜುನ ರಾಜಂಗಳ, ಮಲ್ಲಪ್ಪ ಸಂಕನಾಳ, ಸಂಗಪ್ಪ ಬಿರಾದಾರ ಮತ್ತಿತರರಿದ್ದರು.