ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆದರೆ ಇಲ್ಲಿಗೆ ಬರುತ್ತಿದ್ದಂತೆ ಮಾಡಾಳ್ ಹೈಡ್ರಾಮಾ ಶುರುವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಅಂದು ‘ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ’ ಎಂದಿದ್ದ ಮಾಡಾಳ್ ಇಂದು ಮತ್ತೆ ನಾಪತ್ತೆ!
ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬೌರಿಂಗ್ ಆಸ್ಪತ್ರೆ ಬಳಿಗೆ ಕರೆತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ‘ನನಗೆ ಎದೆನೋವು’ ಎಂದು ಹೇಳಲಾರಂಭಿಸಿದ್ದಾರೆ. ‘ನಾನು ಹಾರ್ಟ್ಪೇಷಂಟ್, ನನಗೆ ಎದೆನೋವು ಬರುತ್ತಿದೆ’ ಎಂದು ಮಾಡಾಳ್ ವರಾತ ತೆಗೆದಿದ್ದಾರೆ.
ಇದನ್ನೂ ಓದಿ: ಮಾಡಾಳ್ ಬಂಧನದ ಹಿಂದಿತ್ತು 20ಕ್ಕೂ ಅಧಿಕ ಲೋಕಾಯುಕ್ತ ಪೊಲೀಸರ ಸತತ 3 ಗಂಟೆಗಳ ಕಸರತ್ತು: ಇಲ್ಲಿದೆ ವಿವರ..
ಮಾಡಾಳ್ ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಬೇಕೋ ಬೇಡವೋ ಎಂದು ಲೋಕಾಯುಕ್ತ ಪೊಲೀಸರು ಇನ್ನಷ್ಟೇ ನಿರ್ಧರಿಸಬೇಕಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಂತರ ವೈದ್ಯರ ಸಲಹೆ ಮೇರೆಗೆ ಆ ಬಗ್ಗೆ ಲೋಕಾಯುಕ್ತ ಪೊಲೀಸರು ನಿರ್ಧರಿಸಲಿದ್ದಾರೆ.
ಪ್ಯಾನ್-ಆಧಾರ್ ಲಿಂಕ್, ಮಾ. 31 ಕಡೇ ದಿನ: ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?
ಬಾಯ್ಬಿಟ್ಟು ಕೆಟ್ಟಳು ಕಿಡ್ನ್ಯಾಪ್ ಮಾಡಿದ್ದ ಮಹಿಳೆ; ಸಿಕ್ಕಿ ಹಾಕಿಕೊಳ್ಳುವಂತೆ ಮಾಡಿತು ‘ಹಾಲು-ಉಪ್ಪಿಟ್ಟು’!