ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ

UDP-5-13-Roadlight

ಬೀದಿದೀಪ ಉದ್ಘಾಟಿಸಿದ ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ

ಉಡುಪಿ: ನಗರಸಭಾ ವ್ಯಾಪ್ತಿಯ ಮಣಿಪಾಲ-ಪರ್ಕಳ ಮುಖ್ಯರಸ್ತೆಯ ಡಿವೈಡರ್​ನಲ್ಲಿ ಅಳವಡಿಸಿದ ಬೀದಿದೀಪಗಳನ್ನು ಶಾಸಕ ಯಶ್​ಪಾಲ್​ ಸುವರ್ಣ ಗುರುವಾರ ಸಂಜೆ ಉದ್ಘಾಟಿಸಿದರು.

ಬಳಿಕ ಅವರು ಮಾತನಾಡಿ, ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಬೀದಿ ದೀಪ ಬೆಳಗುತ್ತಿರುವುದು ಸಂತಸದ ವಿಚಾರವಾಗಿದೆ. ಅಲ್ಲದೆ, ಈ ಭಾಗದ ಜನರ ಬಹುದಿನದ ಬೇಡಿಕೆಯೂ ಈಡೇರಿದಂತಾಗಿದೆ. ಉಡುಪಿಯ ಕರಾವಳಿ ಬೈಪಾಸ್​ನಿಂದ ಪರ್ಕಳ ಗಡಿಭಾಗದ ವರೆಗೆ ದಾರಿದೀಪ ವ್ಯವಸ್ಥೆ ಪೂರ್ಣಗೊಂಡಿದೆ. ಇದರಿಂದ ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.

117 ಬೀದಿ ದೀಪ

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಮಣಿಪಾಲದ ಎಂಐಟಿ ಬಳಿಯಿಂದ ಪರ್ಕಳದ ಗಡಿ ಭಾಗದವರೆಗೆ ಉಡುಪಿ ನಗರಸಭೆ ಮತ್ತು ಭಾರಧ್ವಜ್​ ಎಂಟರ್​ಪೆಸಸ್​ ಸಹಭಾಗಿತ್ವದಲ್ಲಿ 117 ಬೀದಿ ದೀಪ ಅಳವಡಿಸಲಾಗಿದೆ ಎಂದರು.

ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್​, ಅಶ್ವಿನಿ ಅರುಣ್​, ವಿಜಯಲಕ್ಷ್ಮೀ, ಮಂಜುನಾಥ ಮಣಿಪಾಲ, ಬಾಲಕೃಷ್ಣ ಶೆಟ್ಟಿ, ಟಿ.ಜಿ. ಹೆಗ್ಡೆ, ಹರೀಶ್​ ಶೆಟ್ಟಿ, ಗಿರಿಧರ ಆಚಾರ್ಯ, ಗಿರೀಶ್​ ಅಂಚನ್​, ಯೋಗೀಶ್​ ಸಾಲ್ಯಾನ್​, ನಗರ ಬಿಜೆಪಿ ಅಧ್ಯಕ್ಷ ದಿನೇಶ್​ ಅಮೀನ್​, ಸ್ಥಳೀಯ ಮುಖಂಡರಾದ ದಿಲೀಪ್​ ಹೆಗ್ಡೆ, ಹೇಮಂತ ಕುಮಾರ್​ ಯು., ದೇವು ಪೂಜಾರಿ, ಅಕ್ಷಿತ್​ ಶೆಟ್ಟಿ ಹೆರ್ಗ ಇತರರು ಉಪಸ್ಥಿತರಿದ್ದರು.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…