ಶಾಸಕ ಯಶ್ಪಾಲ್ ಸುವರ್ಣ ಸೂಚನೆ | ಉಡುಪಿ ಆರ್ಟಿಒ ಕಚೇರಿಗೆ ಭೇಟಿ
ವಿಜಯವಾಣಿ ಸುದ್ದಿಜಾಲ ಉಡುಪಿ
ನಿಗದಿತ ರೂಟ್ ಪರ್ಮಿಟ್ ಹೊಂದಿರುವ ಬಸ್ಗಳು ಆ ಮಾರ್ಗದಲ್ಲಿ ಸಂಚರಿಸದೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಂಬಾಗಿಲು, ಗುಂಡಿಬೈಲ್, ಕಲ್ಸಂಕ ಮಾರ್ಗದ ಪರ್ಮಿಟ್ ಪಡೆದ ಬಸ್ಗಳು ಸಂಚರಿಸುತ್ತಿಲ್ಲ. ಅಂತಹ ಬಸ್ಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಾರಿಗೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು.
ಉಡುಪಿ ಆರ್ಟಿಒ ಕಚೇರಿಗೆ ಸಂಬಂಧಿಸಿದಂತೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಕ್ರಮ ಕೈಗೊಳ್ಳಿ
ಆರ್ಟಿಒ ಕಚೇರಿಯಲ್ಲಿ ಡೆವಿಂಗ್ ಲೈಸೆನ್ಸ್ ಹಾಗೂ ಆರ್ಸಿ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹಿಂದಿನ ಪುಸ್ತಕ ಆರ್ಸಿ ಹಾಗೂ ಡೆವಿಂಗ್ ಲೈಸನ್ಸ್ ನವೀಕರಣಕ್ಕಾಗಿ ಬೆಂಗಳೂರು ಕಚೇರಿಗೆ ಕಳುಹಿಸುತ್ತಿದ್ದು, 8 ತಿಂಗಳಿಂದ ಈ ಪ್ರಕ್ರಿಯೆ ನಡೆಯದೇ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೆ ಈ ಬಗ್ಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
16 ಹುದ್ದೆ ಖಾಲಿ
ಆರ್ಟಿಒ ಕಚೇರಿಯಲ್ಲಿಯೂ ಸಹ 36 ಮಂಜೂರು ಹುದ್ದೆಗಳ ಪೈಕಿ 15 ಹುದ್ದೆ ಮಾತ್ರ ಭರ್ತಿಯಾಗಿದೆ. ತಕ್ಷಣ ಖಾಲಿ ಹುದ್ದೆ ಭರ್ತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಯಶ್ಪಾಲ್ ಭರವಸೆ ನೀಡಿದರು.
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶೇಖರ್ ಹಾಗೂ ಸಿಬ್ಬಂದಿ ಇದ್ದರು.