ಕಾಮಗಾರಿ ಅವೈಜ್ಞಾನಿಕವಾಗಿದ್ದರೂ ಟೋಲ್

blank

 ಮಳವಳ್ಳಿ : ತಾಲೂಕಿನ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಸಿದೆ. ಗುಣಮಟ್ಟ ಪಾಲನೆ ಮಾಡದೇ ಬ್ಲಫ್ ಸಮೀಪದ ಟೋಲ್ ಸಂಗ್ರಹ ಮಾಡಲು ಮುಂದಾಗಿದೆ ಎಂದು ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಎನ್.ಎಲ್.ಭರತ್ ರಾಜು ದೂರಿದರು.
ಕೆಲ ತಿಂಗಳ ಹಿಂದೆ ಏಕಾಏಕಿ ಟೋಲ್ ಸಂಗ್ರಹ ಪ್ರಾರಂಭಿಸಲು ಮುಂದಾದಾಗ ಸಂಘಟನೆ ವಿರೋಧ ವ್ಯಕ್ತಪಡಿಸಿತ್ತು. ಸ್ಥಳದಲ್ಲೇ ಪ್ರತಿಭಟನೆ ಮಾಡಿದ ಪರಿಣಾಮ ಟೋಲ್ ಸಂಗ್ರಹ ಸ್ಥಗಿತವಾಗಿತ್ತು. ಆದರೆ ಯಾವುದೇ ಸಮಸ್ಯೆ ಸರಿಪಡಿಸದೆ ಮತ್ತೆ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದು ಖಂಡನೀಯ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಪ್ರಾಧಿಕಾರ ಹಲವೆಡೆ ನಿರ್ಮಿಸಿರುವ ಬಸ್ ಶೆಲ್ಟರ್‌ಗಳು ಅವೈಜ್ಞಾನಿಕವಾಗಿವೆ. ಬಸ್ ಮಾರ್ಗದಿಂದ ಬಹಳ ದೂರದಲ್ಲಿವೆ. ಅವುಗಳಿಂದ ಮಳೆ, ಗಾಳಿ, ಬಿಸಿಲಿಗೆ ರಕ್ಷಣೆಯೂ ದೊರಕುತ್ತಿಲ್ಲ. ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೂ ಸೂಕ್ತವಾಗಿ ಇಲ್ಲ ಎಂದವರು ಆರೋಪಿಸಿದರು. ತಾಲೂಕಿನ ನಾಗರಿಕರ ವಾಹನಗಳಿಗೆ ಟೋಲ್ ಮೂಲಕ ಸಾಗಲು ಮುಕ್ತ ಅವಕಾಶವನ್ನು ನೀಡಬೇಕು. ಅದಕ್ಕೆ ಪಾಸ್ ಕಡ್ಡಾಯ ಮಾಡದೇ ಆಧಾರ್ ಕಾರ್ಡ್, ಗುರುತಿನ ಚೀಟಿ ಹಾಗೂ ಇತರೆ ದಾಖಲೆ ಪರಿಗಣಿಸಿ ಮುಕ್ತ ಅವಕಾಶವನ್ನು ಸಂಚಾರಕ್ಕೆ ನೀಡಬೇಕು ಎಂದರು. ಮದ್ದೂರು-ಕುಣಿಗಲ್-ತುಮಕೂರು ರಾಜ್ಯ ಹೆದ್ದಾರಿಯೂ ಗುಣಮಟ್ಟ ಹೊಂದಿಲ್ಲ ಎಂದು ಅವರು ದೂರಿದರು. ಇಷ್ಟೆಲ್ಲಾ ಇದ್ದರೂ ಟೋಲ್ ಸಂಗ್ರಹ ನಿಲ್ಲಿಸದಿದ್ದರೆ ತಾಲೂಕಿನ ಇತರ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರೊಡನೆ ಸೇರಿ ಮುಂಬರುವ ದಿನಗಳಲ್ಲಿ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಎನ್.ಲಿಂಗರಾಜಮೂರ್ತಿ,ಮುಖಂಡರಾದ ನಂಜುಂಡಸ್ವಾಮಿ, ಮರಿಲಿಂಗೇಗೌಡ ಉಪಸ್ಥಿತರಿದ್ದರು.

 

TAGGED:
Share This Article

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Ginger

Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…

ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್​​ ಆಹಾರ ಸೇವಿಸಿದ್ರೆ ಸಾಕು| Weight Gain

Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…