ಮುಂಬೈ: ಮಹಾರಾಷ್ಟ್ರದ ಮಾತುಂಗಾ ವ್ಯಾಪ್ತಿಯಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ತನ್ನ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಆಕಸ್ಮಿಕ ಸಾವು ಎಂದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಬಿಎಸ್ವೈ ಮೋಸ ಮಾಡಿದ್ದಾರೆ: ಸ್ಪರ್ಧೆ ಖಚಿತ ಎಂದ ಈಶ್ವರಪ್ಪ
ಮೃತರನ್ನು ಸೌರಭ್ ಕುಮಾರ್ ಲಡ್ಡಾ ಎಂದು ಗುರುತಿಸಲಾಗಿದೆ. ರಾತ್ರಿ 11:15 ರ ಸುಮಾರಿಗೆ ವಡಾಲಾದ ತನ್ನ ಅಪಾರ್ಟ್ಮೆಂಟ್ನಿಂದ ಒಂಬತ್ತನೇ ಮಹಡಿಯ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಪೋಷಕರು ಪುಣೆಯಲ್ಲಿ ವಾಸ ಮಾಡುತ್ತಿದ್ದಾರೆ.
ಮೃತ ಸೌರಭ್ ಕೆಲಸದ ನಿಮಿತ್ತ ಅಹಮದಾಬಾದ್ಗೆ ಹೋಗಿ ರಾತ್ರಿ 10:30 ರ ಸುಮಾರಿಗೆ ಬಂದಿದ್ದ ನಂತರ ಕೆಲಸ ಒತ್ತಡದಿಂದ ಅವರು ವಾಸಿಸುವ ಮನೆಯ ಬಾಲ್ಕನಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ಅಪಾರ್ಟ್ಮೆಂಟ್ನ ಸೆಕ್ಯುರಿಟಿ ಶವ ಕಂಡು, ಈ ಘಟನೆ ಕುರಿತು ಆತನ ಸ್ನೇಹಿತರು, ಸಹೋದ್ಯೋಗಿಗಳಿಗೆ ತಿಳಿಸಿದ್ದಾನೆ. ಕೂಡಲೇ ಸೌರಭ್ನನ್ನು ಕೂಡಲೇ ಆಸ್ಪತ್ರೆಗೂ ರವಾನಿಸಲಾಗಿದೆ. ಆದರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ಅವರ ಸ್ನೇಹಿತರು ಕುಟುಂಬ ಸದಸ್ಯರಿಗೆ ಮಾಹಿತಿ ತಿಳಿಸಿದ್ದಾರೆ. ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಲಡ್ಡಾ ಐಐಟಿಯಿಂದ ರಾಸಾಯನಿಕ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಐಐಎಂನಿಂದ ಎಂಬಿಎ ಮಾಡಿದ್ದಾರೆ ಎಂದು ವರದಿಯಾಗಿದೆ.
ಸೌರಭ್ ಅವರು ತನ್ನ ಸ್ನೇಹಿತರು ಮತಯ್ತು ಗೆಳತಿಯೊಂದಿಗೆ ವಾಟ್ಸ್ ಆ್ಯಪ್ ಚಾಟಿಂಗ್ ಮಾಡಿದ್ದು ಕಂಪನಿಯಲ್ಲಿ ಅನುಭವಿಸುತ್ತಿದ್ದ ಕೆಲಸದ ಒತ್ತಡದ ಬಗ್ಗೆ ಹೇಳಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಸೌರಭ್ ಅವರ ಪೋಷಕರು, ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಆತ ಕೆಲಸ ಮಾಡುತ್ತಿದ್ದ ಕಂಪನಿಯ ಸಹೋದ್ಯೋಗಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದರು.
ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಬಿಎಸ್ವೈ ಮೋಸ ಮಾಡಿದ್ದಾರೆ: ಸ್ಪರ್ಧೆ ಖಚಿತ ಎಂದ ಈಶ್ವರಪ್ಪ