ನಮಗೆ ಪ್ರಧಾನಿ ಮೋದಿ ಉಚಿತ ಪ್ರಯಾಣ ಕಲ್ಪಿಸಿದ್ದಾರೆ; ಟಿಕೆಟ್​ ಇಲ್ಲದೇ ರೈಲಿನಲ್ಲಿ Maha Kumbh ಮೇಳಕ್ಕೆ ಹೋಗುತ್ತಿದ್ದ ಮಹಿಳೆಯರ ಉತ್ತರ ವೈರಲ್

Mahakumbh Viral Video

ಪಟ್ನಾ: ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳವು (Maha Kumbh Mela) ಒಂದಿಲ್ಲೊಂದು ಕಾರಣಕ್ಕೆ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಈಗಾಗಲೇ ಕೋಟ್ಯಂತರ ಭಕ್ತರು ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದು, ಗಿನ್ನಿಸ್ಗ್​ ದಾಖಲೆಗೆ ಭಾಜನವಾಗಿದೆ. ಫೆಬ್ರವರಿ 26ರಂದು ಮಹಾಕುಂಭಮೇಳವು ಸಂಪನ್ನಗೊಳ್ಳಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಇದೀಗ ಮಹಾಕುಂಭಮೇಳಕ್ಕೆ (Maha Kumbh Mela) ತೆರಳುತ್ತಿದ್ದಾಗ ಆಶ್ಚರ್ಯಕರ ಘಟನೆಯೊಂದು ನಡೆದಿದ್ದು, ಮಹಿಳೆಯರು ನೀಡಿದ ಉತ್ತರ ಕೇಳಿ ಅಧಿಕಾರಿಗಳು ದಂಗಾಗಿದ್ಧಾರೆ.

ಬಿಹಾರದ ಬಕ್ಸರ್​ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಡಿಆರ್​ಎಮ್​ ರೈಲಿನಲ್ಲಿ ಟಿಕೆಟ್​ಗಳನ್ನು ಪರಿಶೀಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಿಳೆಯರು ನೀಡಿದ ಉತ್ತರ ಕೇಳಿ ಅಧಿಕಾರ ಒಂದು ಕ್ಷಣ ಆಘಾತಕ್ಕೊಳಗಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಡಣಾಪುರ ಡಿಆರ್‌ಎಮ್ ಜಯಂತ್ ಕಾಂತ್ ಚೌಧರಿ ಬಕ್ಸರ್ ರೈಲು ನಿಲ್ದಾಣದಲ್ಲಿ ಟಿಕೆಟ್​ಗಳನ್ನು ಪರಿಶೀಲಿಸುತ್ತಿದ್ದರು. ತಪಾಸಣೆಯ ವೇಳೆ ಕೆಲವು ಮಹಿಳೆಯರು ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿರುವುದು ಕಂಡು ಬಂದಿದ್ದು, ಕೂಡಲೇ ಅಧಿಕಾರಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಮಹಿಳೆಯರು ಪ್ರಧಾನಿ ಮೋದಿ ಮಹಿಳೆಯರು ರೈಲಿನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಹೇಳಿದ್ದಾರೆ. ಅದಕ್ಕಾಗಿ ನಾವು ಟಿಕೆಟ್​ ತೆಗೆದುಕೊಳ್ಳದೇ ಮಹಾಕುಂಭ ಮೇಳ (Maha Kumbh Mela) ನಡೆಯುತ್ತಿರುವ ಪ್ರಯಾಗ್​ರಾಜ್​ಗೆ ಹೋಗುತ್ತಿದ್ದೇವೆ ಎಂದು ಉತ್ತರ ನೀಡಿದ್ದಾರೆ. 

ಮಹಿಳೆಯರ ಉತ್ತರ ಕೇಳಿ ಒಂದು ಕ್ಷಣ ಆಘಾತಕ್ಕೊಳಗಾದ ಅಧಿಕಾರಿಯು ಏನು ಮಾತನಾಡದೆ ನಕ್ಕು ಸುಮ್ಮನಾಗಿದ್ದಾರೆ. ಆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಈ ರೀತಿಯ ಯಾವುದೇ ಘೋಷಣೆಯನ್ನು ಮಾಡಿಲ್ಲ. ನಿಮಗೆ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ. ಟಿಕೆಟ್​ ಇಲ್ಲದೇ ಪ್ರಯಾಣಿಸುವುದು ರೈಲ್ವೆ ಕಾನೂನುಗಳಿಗೆ ವಿರುದ್ಧವಾಗಿದೆ ಎಂದು ಮಹಿಳೆಯರಿಗೆ ಸ್ಪಷ್ಟಪಡಿಸಿದ್ದಾರೆ. ಆದರೆ, ಟಿಕೆಟ್​ ಇಲ್ಲದೇ ಪ್ರಯಾಣಿಸಿದ್ದಕ್ಕೆ ದಂಡ ವಿಧಿಸಿದರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. 

ಚಾಂಪಿಯನ್ಸ್ ಟ್ರೋಫಿ ವೇಳೆ ಪತ್ನಿಯರ ಜತೆ ಇರಲು ಅವಕಾಶ ನೀಡಿದ BCCI; ಆದರೆ ಈ ಷರತ್ತನ್ನು ಪಾಲಿಸಿದರೆ ಮಾತ್ರ

ದಯವಿಟ್ಟು ಕ್ಷಮೆಯಿರಲಿ… ಮದುವೆಯಾದ ಎರಡೇ ದಿನಕ್ಕೆ ಕ್ಷಮೆಯಾಚಿಸಿದ ಡಾಲಿ Dhananjay

Share This Article

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…

ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad

papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…