More

    ಯಾದಗಿರಿಯಿಂದ ನಿರ್ಗಮಿಸಿದ ಪ್ರಧಾನಿ ಮೋದಿ; 2 ಗಂಟೆಗೆ ಲಂಬಾಣಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

    ಯಾದಗಿರಿ: ಕರ್ನಾಟಕದ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಶಂಕುಸ್ಥಾಪನೆ ಮತ್ತು ಯೋಜನೆಗಳ ಉದ್ಘಾಟನೆ ನೆರವೇರಿಸಿದರು. ಮಧ್ಯಾಹ್ನ 12:15ಕ್ಕೆ ಸಭಾ ಕಾರ್ಯಕ್ರಮ ಶುರುವಾಗಿದ್ದು ಕಾರ್ಯಕ್ರಮಗಳ ಶಿಲಾನ್ಯಾಸ, ಉದ್ಘಾಟನೆಗಳನ್ನು ಪ್ರಧಾನಿ ಮೋದಿ ನೆರವೇರಿಸಿದ್ದಾರೆ. 1:10 ಕ್ಕೆ ಕೊಡೆಕಲ್ ಹೆಲಿಪ್ಯಾಡ್​ನಿಂದ ಮಳಖೇಡ ನತ್ತ ಪ್ರಯಾಣ ಪ್ರಾರಂಭಿಸಿದ್ದು

    ಕೊಡೆಕಲ್ ನಿಂದ AMI-17 ಹೆಲಿಕಾಪ್ಟರ್ ಮೂಲಕ ಕಲಬುರಗಿಯ ಮಳಖೇಡಗೆ ಪ್ರಯಾಣಿಸಲಿದ್ದು ಕಲಬುರಗಿ ಜಿಲ್ಲೆಯ ಮಳಖೇಡ್ ಹೆಲಿಪ್ಯಾಡ್​ನಲ್ಲಿ 2: 00 ಗೆ ಮೋದಿ ಲ್ಯಾಂಡ್​ ಆಗಲಿದ್ದಾರೆ 2:05 ಕ್ಕೆ ಮಳಖೇಡ ಹೆಲಿಪ್ಯಾಡ್ ನಿಂದ ಕಾರ್ಯಕ್ರಮ ಸ್ಥಳಕ್ಕೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿದ್ದು 2:15 ಕ್ಕೆ ಲಂಬಾಣಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಹಕ್ಕು ಪತ್ರ ವಿತರಣೆ ಮತ್ತು ವಿವಿಧ ಯೋಜನೆಗಳ ಕಾರ್ಯಕ್ರಮಗಳ ಶಂಕುಸ್ಥಾಪನೆ ನಡೆಯಲಿದ್ದು 3:00 ಗಂಟೆಗೆ ಕಾರ್ಯಕ್ರಮ ವೇದಿಕೆಯಿಂದ ಪ್ರಧಾನಿ ಮೋದಿ ನಿರ್ಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಿ 3:35 ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಮುಂಬೈನತ್ತ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts