ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜಿಸಲಿದ್ದಾರೆ. ಕಲಬುರಗಿ- ಯಾದಗಿರಿಯಲ್ಲಿ ಮೋದಿ ಮೇನಿಯಾ ಪ್ರಾರಂಭವಾಗಲಿದೆ. ಬೆಳಗ್ಗೆ ದೆಹಲಿಯಿಂದ ವಿಶೇಷ IAF BBJ ವಿಮಾನ ಮೂಲಕ ಕಲಬುರಗಿಗೆ ಮೋದಿ ಆಗಮಿಸಲಿದ್ದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯಲ್ಲಿ ಲ್ಯಾಂಡ್ ಆಗಲಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಇತರ ಕರ್ನಾಟಕದ ಸಚಿವರು ಸ್ವಾಗತಿಸಲಿದ್ದಾರೆ. ಬೆಳಿಗ್ಗೆ 11:05ಕ್ಕೆ ಕಲಬುರಗಿಯಿಂದ AMI-17 ಹೆಲಿಕಾಪ್ಟರ್ನಲ್ಲಿ ಯಾದಗಿರಿಗೆ ಪ್ರಯಾಣ ಬೆಳೆಸಲಿದ್ದು ಯಾದಗಿರಿ ಜಿಲ್ಲೆಯ ಕೊಡೆಕಲ್ ಹೆಲಿಪ್ಯಾಡ್ ನಿಲ್ದಾಣದಲ್ಲಿ ಮೋದಿ ಲ್ಯಾಂಡಿಂಗ್ ಮಾಡಲಿದ್ದಾರೆ.
ಕೊಡೆಕಲ್ ಹೆಲಿಪ್ಯಾಡ್ನಿಂದ ಕಾರ್ಯಕ್ರಮ ಸ್ಥಳಕ್ಕೆ ರಸ್ತೆ ಮೂಲಕ ಪ್ರಯಾಣ ಬೆಳೆಸಲಿರುವ ಪ್ರಧಾನಿ 12 ಗಂಟೆಗೆ ವಿವಿಧ ಕಾರ್ಯಕ್ರಮಗಳ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಕಾರ್ಯಕ್ರಮ ಮುಗಿಸಿ 1:05 ನಿಮಿಷಕ್ಕೆ ಕಾರ್ಯಕ್ರಮ ಸ್ಥಳದಿಂದ ಕೊಡೆಕಲ್ ಹೆಲಿಪ್ಯಾಡ್ ಸ್ಥಳಕ್ಕೆ ರಸ್ತೆ ಮೂಲಕ ಹಿಂತಿರುಗಲಿದ್ದಾರೆ. 1:10ಕ್ಕೆ ಕೊಡೆಕಲ್ ಹೆಲಿಪ್ಯಾಡ್ನಿಂದ ಮಳಖೇಡನತ್ತ ಪ್ರಯಾಣ ಬೆಳೆಸಲಿದ್ದಾರೆ.
ನಂತರ ಪ್ರಧಾನಿ ಮೋದಿ 2:15 ಕ್ಕೆ ಲಂಬಾಣಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಜೊತೆಯಲ್ಲೇ ವಿವಿಧ ಯೋಜನೆಗಳ ಕಾರ್ಯಕ್ರಮಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3:00 ಗಂಟೆಗೆ ಕಾರ್ಯಕ್ರಮ ವೇದಿಕೆಯಿಂದ ಮೋದಿ ನಿರ್ಗಮಿಸಲಿದ್ದು ಅಲ್ಲಿಂದ ಹೆಲಿಪ್ಯಾಡ್ ತಲುಪಿ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. 3:30 ಕ್ಕೆ ಕಲಬುರಗಿ ಏರ್ಪೋರ್ಟ್ ಮೋದಿ ತಲುಪಲಿದ್ದು 3:35 ಕ್ಕೆ ಕಲಬುರಗಿ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನ ಮೂಲಕ ಮುಂಬೈನತ್ತ ಮೋದಿ ಪ್ರಯಾಣ ಬೆಳೆಸಲಿದ್ದಾರೆ.