ಕರುನಾಡಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಈಗಾಗಲೇ ದೇಶಾದ್ಯಂತ ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇನ್ನು, ಇದೇ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡಾ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ, ಕನ್ನಡ ಸಿನಿರಂಗದ ಮೋಹಕ ತಾರೆ ನಟಿ ರಮ್ಯಾ ಕೂಡಾ ತಮ್ಮ ಟ್ವಿಟರ್ ಖಾತೆಯ ಮೂಲಕ ಈ ವಿಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಭಾರತದ ಯುವಜನತೆ ಈ ರೀತಿ ಧರ್ಮದ ಕಾರಣಕ್ಕೆ ಎರಡು ಭಾಗವಾಗಿರುವುದನ್ನು ನೋಡಲು ದುಃಖವಾಗುತ್ತಿದೆ’ ಎಂದು ರಮ್ಯಾ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಪರಸ್ಪರ ಕಾದಾಡುತ್ತಿರುವ, ಜಗಳವಾಡುತ್ತಿರುವ ಒಂದು ವಿಡಿಯೋವನ್ನು ಕೂಡಾ ಮೋಹಕ ತಾರೆ ಶೇರ್ ಮಾಡಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಕರ್ನಾಟಕದಲ್ಲಿ ಕಾಲೇಜುಗಳ ಅಂಗಳದಲ್ಲಿ ಶುರುವಾದ ಹಿಜಾಬ್ ವರ್ಸಸ್ ಕೇಸರಿ ಗಲಾಟೆಯ ಕುರಿತು ಅನೇಕ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ಕಾಲಿವುಡ್ ನಟ ಕಮಲ್ ಹಾಸನ್, ಗಾಯಕಿ ಸುಹಾನಾ ಸಯ್ಯದ್ ಕೂಡಾ ಈ ವಿಚಾರ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಬ್ಯಾಕ್ ಲೆಸ್ ಆದ ಕಿಯಾರಾ! ಹಾಟ್ ಎಂದ ಬೇರೆ ಸೆಲೆಬ್ರಿಟಿಗಳು: ವಿಡಿಯೋ ವೈರಲ್…