blank

13 ಸಾವಿರ ನಿರ್ಗತಿಕರಿಗೆ ಮಾಸಾಶನ

blank

ಮೊಳಕಾಲ್ಮೂರು: ಅನಕ್ಷರಸ್ಥರಿಗೆ ಅಕ್ಷರದ ಅರಿವು, ಉದ್ಯೋಗ ಕೊಡಿಸುವುದಲ್ಲದೆ 4135 ಅಂಗವಿಕಲರಿಗೆ 94 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆ ನೀಡಿ ಅವರ ಬದುಕು ಬಂಗಾರವಾಗಲು ಧರ್ಮಸ್ಥಳ ಸಂಸ್ಥೆ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಎಂ.ದಿನೇಶ್ ತಿಳಿಸಿದರು.

ಇಲ್ಲಿನ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಚೇರಿಯಲ್ಲಿ ಬುಧವಾರ ಜನ ಮಂಗಲ ಯೋಜನೆಯಡಿ ಅಂಗವಿಕಲರಿಗೆ ಸಾಧನ ಸಲಕರಣೆ ವಿತರಿಸಿ ಮಾತನಾಡಿದರು.

ಸಂಸ್ಥೆಯು ರಾಜ್ಯದ 13 ಸಾವಿರ ನಿರ್ಗತಿಕರಿಗೆ ಮಾಸಾಶನ, 12 ಸಾವಿರ ಬಡ ಮಕ್ಕಳಿಗೆ ಶಿಷ್ಯವೇತನ ಕೊಡಿಸುವ ಜತೆಗೆ ದೇವಸ್ಥಾನ, ಶ್ರದ್ಧಾಕೇಂದ್ರ, ಕೆರೆಗಳ ಪುನಶ್ಚೇತನಕ್ಕೆ ಒತ್ತುಕೊಟ್ಟಿದೆ. ಸಾಮಾಜಿಕ, ಧಾರ್ಮಿಕ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವಂತಹ ಹಲವಾರು ಕಾರ್ಯಕ್ರಮ ಕೈಗೆತ್ತಿಕೊಂಡಿದೆ ಎಂದು ತಿಳಿಸಿದರು.

ಸಂಸ್ಥೆಯ ಕೊರಗಪ್ಪ ಪೂಜಾರಿ, ಜನ ಜಾಗೃತಿ ವೇದಿಕೆ ಸದಸ್ಯರಾದ ತಿಪ್ಪೇಸ್ವಾಮಿ, ಶೇಖರ್, ವಕೀಲೆ ಎಂ.ಎನ್.ವಿಜಯಲಕ್ಷ್ಮಿ, ಮೇಲ್ವಿಚಾರಕರಾದ ಈ.ದೇವೀರಮ್ಮ, ಲಕ್ಷ್ಮೀದೇವಿ ಹಾಗೂ ಅಂಗವಿಕಲರಿದ್ದರು.

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…